Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಮೇಲುಕೋಟೆ ಯತಿರಾಜ ಜಿಯರ್ ಗೆ Y ಮಾದರಿ ಭದ್ರತೆ

ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿ ಎಫ್ ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖಾ ಮಠದಲ್ಲಿ ವಾಸವಾಗಿದ್ದು ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.
ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ ಎಫ್ ಐ ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿದೆ ಎಂದು ಹೇಳಲಾಗಿದೆ.
ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!