ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿ ಎಫ್ ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖಾ ಮಠದಲ್ಲಿ ವಾಸವಾಗಿದ್ದು ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.
ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ ಎಫ್ ಐ ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿದೆ ಎಂದು ಹೇಳಲಾಗಿದೆ.
ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…