ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿ ಎಫ್ ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖಾ ಮಠದಲ್ಲಿ ವಾಸವಾಗಿದ್ದು ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.
ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ ಎಫ್ ಐ ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿದೆ ಎಂದು ಹೇಳಲಾಗಿದೆ.
ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…
ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…