ಜಿಲ್ಲೆಗಳು

ಟೆಕ್‌ ಕಾರಿಡಾರ್‌ನಲ್ಲಿ ಮೆಟ್ರೋ ಸವಾರಿ ಸಂಭ್ರಮ, ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಾರ್ಗದಲ್ಲಿ ಸಂಚಾರ ಶುರು

ಬೆಂಗಳೂರು: ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಧ್ಯೆ ‘ನಮ್ಮ ಮೆಟ್ರೋ’ ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು.
ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ 16,319 ಜನರು ಪ್ರಯಾಣ ಮಾಡಿದ್ದಾರೆ. ಈ ಮಾರ್ಗದಲ್ಲಿಒಟ್ಟು 12 ನಿಲ್ದಾಣಗಳಿದ್ದು, 35 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ.
ಈ ಮೆಟ್ರೊ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದರು. ಸೋಮವಾರದಿಂದ ಮುಂಜಾನೆ 5 ಗಂಟೆಯಿಂದ ರಾತ್ರಿ 11 ರವೆರೆಗೂ ಮೆಟ್ರೊ ರೈಲು ಸೇವೆ ದೊರೆಯಲಿದೆ. ಪ್ರಯಾಣಿಕರು ಟೋಕನ್‌, ಮೊಬೈಲ್‌ ಕ್ಯೂ ಆರ್‌ ಟಿಕೆಟ್‌, ಸ್ಮಾರ್ಟ್‌ ಕಾರ್ಡ್‌ ಬಳಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮಾರತ್‌ಹಳ್ಳಿ, ಕೆ.ಆರ್‌.ಪುರ, ಐಟಿಪಿಎಲ್‌ ಸುತ್ತಮುತ್ತಲ ಐಟಿ-ಬಿಟಿ ಕಂಪೆನಿಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಮೆಟ್ರೊ ರೈಲು ಸೇವೆಯಿಂದ ತುಂಬಾ ಉಪಯೋಗವಾಗಲಿದೆ. ಮೆಟ್ರೊ ಸೇವೆಯಿಂದಾಗಿ ಸಂಚಾರ ದಟ್ಟಣೆ ತಗ್ಗಲಿದೆ.

ನಿತ್ಯ 1.5 ಲಕ್ಷ ಪ್ರಯಾಣಿಕರ ನಿರೀಕ್ಷೆ : 13.71 ಕಿ.ಮೀ ಉದ್ದದ ಈ ಮಾರ್ಗ ನಿರ್ಮಾಣಕ್ಕೆ 4500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೆಟ್ರೊದಲ್ಲಿ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರ ತಲುಪಲು ಕೇವಲ 25 ನಿಮಿಷ ಸಾಕು. ಈ ಮಾರ್ಗದಲ್ಲಿ ನಿತ್ಯ 1.50 ಲಕ್ಷ ಮಂದಿ ಪ್ರಯಾಣಿಸುವ ನಿರೀಕ್ಷೆ ಇದೆ. ಪ್ರತಿ 12 ನಿಮಿಷಕ್ಕೊಂದು ರೈಲನ್ನು ಕಾರ್ಯಾಚರಣೆಗೊಳಿಸಲು ಬಿಎಂಆರ್‌ಸಿಎಲ್‌ ಸಜ್ಜಾಗಿದೆ. ಬಿಎಂಟಿಸಿಯು ಈ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 195 ಫೀಡರ್‌ ಬಸ್‌ಗಳನ್ನು ಓಡಿಸುತ್ತಿದೆ.
30 ರಿಂದ ಮೊಬಿಲಿಟಿ ಕಾರ್ಡ್‌ ಬಳಕೆ ಸಾಧ್ಯ : ನಮ್ಮ ಮೆಟ್ರೊದಲ್ಲಿ ಮಾ.30ರಿಂದ ಆರ್‌ಬಿಎಲ್‌ ಬ್ಯಾಂಕ್‌ ರುಪೇ ಎನ್‌ಸಿಎಂಸಿ (ನ್ಯಾಶನಲ್‌ ಕಾಮನ್‌ ಮೊಬಿಲಿಟಿ ಕಾರ್ಡ್‌) ಬಳಕೆ ಸಾಧ್ಯವಾಗಲಿದೆ. ಮೆಟ್ರೊ ನಿಲ್ದಾಣ, ಆರ್‌ಬಿಎಲ್‌ ಬ್ಯಾಂಕ್‌ ಶಾಖೆಗಳಲ್ಲಿಈ ಕಾರ್ಡ್‌ ಲಭ್ಯವಿರಲಿವೆ.

lokesh

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

5 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

13 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

27 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago