ಜಿಲ್ಲೆಗಳು

ಟೆಕ್‌ ಕಾರಿಡಾರ್‌ನಲ್ಲಿ ಮೆಟ್ರೋ ಸವಾರಿ ಸಂಭ್ರಮ, ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಾರ್ಗದಲ್ಲಿ ಸಂಚಾರ ಶುರು

ಬೆಂಗಳೂರು: ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಧ್ಯೆ ‘ನಮ್ಮ ಮೆಟ್ರೋ’ ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು.
ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ 16,319 ಜನರು ಪ್ರಯಾಣ ಮಾಡಿದ್ದಾರೆ. ಈ ಮಾರ್ಗದಲ್ಲಿಒಟ್ಟು 12 ನಿಲ್ದಾಣಗಳಿದ್ದು, 35 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ.
ಈ ಮೆಟ್ರೊ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದರು. ಸೋಮವಾರದಿಂದ ಮುಂಜಾನೆ 5 ಗಂಟೆಯಿಂದ ರಾತ್ರಿ 11 ರವೆರೆಗೂ ಮೆಟ್ರೊ ರೈಲು ಸೇವೆ ದೊರೆಯಲಿದೆ. ಪ್ರಯಾಣಿಕರು ಟೋಕನ್‌, ಮೊಬೈಲ್‌ ಕ್ಯೂ ಆರ್‌ ಟಿಕೆಟ್‌, ಸ್ಮಾರ್ಟ್‌ ಕಾರ್ಡ್‌ ಬಳಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮಾರತ್‌ಹಳ್ಳಿ, ಕೆ.ಆರ್‌.ಪುರ, ಐಟಿಪಿಎಲ್‌ ಸುತ್ತಮುತ್ತಲ ಐಟಿ-ಬಿಟಿ ಕಂಪೆನಿಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಮೆಟ್ರೊ ರೈಲು ಸೇವೆಯಿಂದ ತುಂಬಾ ಉಪಯೋಗವಾಗಲಿದೆ. ಮೆಟ್ರೊ ಸೇವೆಯಿಂದಾಗಿ ಸಂಚಾರ ದಟ್ಟಣೆ ತಗ್ಗಲಿದೆ.

ನಿತ್ಯ 1.5 ಲಕ್ಷ ಪ್ರಯಾಣಿಕರ ನಿರೀಕ್ಷೆ : 13.71 ಕಿ.ಮೀ ಉದ್ದದ ಈ ಮಾರ್ಗ ನಿರ್ಮಾಣಕ್ಕೆ 4500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೆಟ್ರೊದಲ್ಲಿ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರ ತಲುಪಲು ಕೇವಲ 25 ನಿಮಿಷ ಸಾಕು. ಈ ಮಾರ್ಗದಲ್ಲಿ ನಿತ್ಯ 1.50 ಲಕ್ಷ ಮಂದಿ ಪ್ರಯಾಣಿಸುವ ನಿರೀಕ್ಷೆ ಇದೆ. ಪ್ರತಿ 12 ನಿಮಿಷಕ್ಕೊಂದು ರೈಲನ್ನು ಕಾರ್ಯಾಚರಣೆಗೊಳಿಸಲು ಬಿಎಂಆರ್‌ಸಿಎಲ್‌ ಸಜ್ಜಾಗಿದೆ. ಬಿಎಂಟಿಸಿಯು ಈ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 195 ಫೀಡರ್‌ ಬಸ್‌ಗಳನ್ನು ಓಡಿಸುತ್ತಿದೆ.
30 ರಿಂದ ಮೊಬಿಲಿಟಿ ಕಾರ್ಡ್‌ ಬಳಕೆ ಸಾಧ್ಯ : ನಮ್ಮ ಮೆಟ್ರೊದಲ್ಲಿ ಮಾ.30ರಿಂದ ಆರ್‌ಬಿಎಲ್‌ ಬ್ಯಾಂಕ್‌ ರುಪೇ ಎನ್‌ಸಿಎಂಸಿ (ನ್ಯಾಶನಲ್‌ ಕಾಮನ್‌ ಮೊಬಿಲಿಟಿ ಕಾರ್ಡ್‌) ಬಳಕೆ ಸಾಧ್ಯವಾಗಲಿದೆ. ಮೆಟ್ರೊ ನಿಲ್ದಾಣ, ಆರ್‌ಬಿಎಲ್‌ ಬ್ಯಾಂಕ್‌ ಶಾಖೆಗಳಲ್ಲಿಈ ಕಾರ್ಡ್‌ ಲಭ್ಯವಿರಲಿವೆ.

lokesh

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago