ಬೆಂಗಳೂರು: ವೈಟ್ಫೀಲ್ಡ್- ಕೆ.ಆರ್.ಪುರ ಮಧ್ಯೆ ‘ನಮ್ಮ ಮೆಟ್ರೋ’ ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು.
ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ 16,319 ಜನರು ಪ್ರಯಾಣ ಮಾಡಿದ್ದಾರೆ. ಈ ಮಾರ್ಗದಲ್ಲಿಒಟ್ಟು 12 ನಿಲ್ದಾಣಗಳಿದ್ದು, 35 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ.
ಈ ಮೆಟ್ರೊ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಿದ್ದರು. ಸೋಮವಾರದಿಂದ ಮುಂಜಾನೆ 5 ಗಂಟೆಯಿಂದ ರಾತ್ರಿ 11 ರವೆರೆಗೂ ಮೆಟ್ರೊ ರೈಲು ಸೇವೆ ದೊರೆಯಲಿದೆ. ಪ್ರಯಾಣಿಕರು ಟೋಕನ್, ಮೊಬೈಲ್ ಕ್ಯೂ ಆರ್ ಟಿಕೆಟ್, ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮಾರತ್ಹಳ್ಳಿ, ಕೆ.ಆರ್.ಪುರ, ಐಟಿಪಿಎಲ್ ಸುತ್ತಮುತ್ತಲ ಐಟಿ-ಬಿಟಿ ಕಂಪೆನಿಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಮೆಟ್ರೊ ರೈಲು ಸೇವೆಯಿಂದ ತುಂಬಾ ಉಪಯೋಗವಾಗಲಿದೆ. ಮೆಟ್ರೊ ಸೇವೆಯಿಂದಾಗಿ ಸಂಚಾರ ದಟ್ಟಣೆ ತಗ್ಗಲಿದೆ.
ನಿತ್ಯ 1.5 ಲಕ್ಷ ಪ್ರಯಾಣಿಕರ ನಿರೀಕ್ಷೆ : 13.71 ಕಿ.ಮೀ ಉದ್ದದ ಈ ಮಾರ್ಗ ನಿರ್ಮಾಣಕ್ಕೆ 4500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೆಟ್ರೊದಲ್ಲಿ ವೈಟ್ಫೀಲ್ಡ್ನಿಂದ ಕೆ.ಆರ್.ಪುರ ತಲುಪಲು ಕೇವಲ 25 ನಿಮಿಷ ಸಾಕು. ಈ ಮಾರ್ಗದಲ್ಲಿ ನಿತ್ಯ 1.50 ಲಕ್ಷ ಮಂದಿ ಪ್ರಯಾಣಿಸುವ ನಿರೀಕ್ಷೆ ಇದೆ. ಪ್ರತಿ 12 ನಿಮಿಷಕ್ಕೊಂದು ರೈಲನ್ನು ಕಾರ್ಯಾಚರಣೆಗೊಳಿಸಲು ಬಿಎಂಆರ್ಸಿಎಲ್ ಸಜ್ಜಾಗಿದೆ. ಬಿಎಂಟಿಸಿಯು ಈ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 195 ಫೀಡರ್ ಬಸ್ಗಳನ್ನು ಓಡಿಸುತ್ತಿದೆ.
30 ರಿಂದ ಮೊಬಿಲಿಟಿ ಕಾರ್ಡ್ ಬಳಕೆ ಸಾಧ್ಯ : ನಮ್ಮ ಮೆಟ್ರೊದಲ್ಲಿ ಮಾ.30ರಿಂದ ಆರ್ಬಿಎಲ್ ಬ್ಯಾಂಕ್ ರುಪೇ ಎನ್ಸಿಎಂಸಿ (ನ್ಯಾಶನಲ್ ಕಾಮನ್ ಮೊಬಿಲಿಟಿ ಕಾರ್ಡ್) ಬಳಕೆ ಸಾಧ್ಯವಾಗಲಿದೆ. ಮೆಟ್ರೊ ನಿಲ್ದಾಣ, ಆರ್ಬಿಎಲ್ ಬ್ಯಾಂಕ್ ಶಾಖೆಗಳಲ್ಲಿಈ ಕಾರ್ಡ್ ಲಭ್ಯವಿರಲಿವೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…