ಜಿಲ್ಲೆಗಳು

ಅಹವಾಲು ಆಲಿಸಲು ಮಹಾಪೌರರ ಪಾದಯಾತ್ರೆ

ದೇವಯ್ಯನಹುಂಡಿ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸುವ ಭರವಸೆ

ಮೈಸೂರು: ಮಹಾಪೌರ ಶಿವಕುಮಾರ್ ಅಶೋಕಪುರಂ, ದೇವಯ್ಯನಹುಂಡಿಯಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ. ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಬೇಸ್ ಪಿಯುಸಿ ಕಾಲೇಜಿನ ಬಳಿಯಿಂದ ಪಾದಯಾತ್ರೆ ಆರಂಭಿಸಿದ ಮಹಾಪೌರರು ಅಶೋಕಪುರಂ ೫ನೇ ಕ್ರಾಸ್‌ನಿಂದ ೧೦ನೇ ಕ್ರಾಸ್ ತನಕ ಸಂಚರಿಸಿದರು. ಈ ವೇಳೆ ಕಳೆದ ತಿಂಗಳು ಮಳೆಯಿಂದಾಗಿ ಮನೆಗಳು ಹಾನಿಗೀಡಾಗಿರುವ ಬಗ್ಗೆ ಮಹಾಪೌರರ ಗಮನ ಸೆಳೆದ ನಿವಾಸಿಗಳು ಕೂಡಲೇ ಮನೆ ಮಂಜೂರು ಮಾಡಿಸಿಕೊಡುವಂತೆ ಕೋರಿದರು.

ನಗರಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ ಅವರು ಮಾತನಾಡಿ, ಮಳೆಯಿಂದಾಗಿ ಅಶೋಕಪುರಂ ಅಡ್ಡರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಡಾಂಬರೀಕರಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಿಕೊಡಬೇಕು ಮನವಿ ಮಾಡಿದರಲ್ಲದೆ, ವೀಳ್ಯದೆಲೆ ಬೆಳೆಗಾರರಲ್ಲಿ ಕೆಲವರಿಗೆ ಇನ್ನೂ ಪರ್ಯಾಯ ಜಾಗ ಮತ್ತು ಹಕ್ಕುಪತ್ರ ನೀಡಿಲ್ಲ ಎಂದು ಹೇಳಿದರು.

ದೇವಯ್ಯನಹುಂಡಿ, ಶ್ರೀರಾಂಪುರ ಎರಡನೇ ಹಂತದ ಸ್ಮಶಾನಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮೇಯರ್, ಕಾಂಪೌಂಡ್, ನೀರಿನ ವ್ಯವಸ್ಥೆ, ತೆರೆದ ಶೆಲ್ಟರ್ ನಿರ್ಮಾಣ ಹಾಗೂ ಸ್ನಾನದ ಕೊಠಡಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ದೇವಯ್ಯನಹುಂಡಿ ನಿವಾಸಿಗಳು, ಇಲ್ಲಿರುವ ಸ್ಮಶಾನದ ಜಾಗವನ್ನು ದೇವಯ್ಯನಹುಂಡಿಗೆ ಸೀಮಿತವೆಂದು ಜಿಲ್ಲಾಧಿಕಾರಿಗಳು ಜಾಗ ಮಂಜೂರು ಮಾಡಿದ್ದಾರೆ. ಮಹದೇವಪುರ, ರಮಾಬಾಯಿನಗರ, ಮುನಿಸ್ವಾಮಿನಗರದಿಂದ ಅಂತ್ಯಕ್ರಿಯೆ ಮಾಡಲು ಬರುವವರಿಗೆ ಅವಕಾಶ ನೀಡಬಾರದು ಎಂದು ಎಂದು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಮಹಾಪೌರರು ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಶ್ವಿನಿ ಕಲ್ಯಾಣ ಮಂಟಪದ ಎದುರು ಇರುವ ಖಾಲಿ ಜಾಗದಲ್ಲಿ ವ್ಯಾಯಾಮ ಶಾಲೆ ಮತ್ತು ಅಂಬೇಡ್ಕರ್ ಪುತ್ತಳಿಯನ್ನು ನಿರ್ಮಿಸಿಕೊಡುವಂತೆ ನಿವಾಸಿಗಳು ಮನವಿ ಸಲ್ಲಿಸಿದರು. ಆದರೆ, ಕೆಲವರು ಮುಖ್ಯರಸ್ತೆಯಾಗಿರುವ ಕಾರಣ ಉಳಿದ ಜಾಗದಲ್ಲಿ ರಸ್ತೆ ನಿರ್ಮಿಸಿದರೆ ಉತ್ತಮವಾಗಲಿದೆ ಎಂದರು. ಈ ವೇಳೆ ಮಹಾಪೌರರು ಸ್ಥಳೀಯ ನಗರಪಾಲಿಕೆ ಸದಸ್ಯರೊಂದಿಗೆ ಚರ್ಚಿಸಿ, ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಬಳಿಕ ಮಾನಂದವಾಡಿ, ಶ್ರೀರಾಂಪುರ ಕಡೆಗಳಲ್ಲಿ ನಡೆಯುತ್ತಿರುವ ರಸ್ತೆಗಳ ಕಾಮಗಾರಿಯನ್ನು ಪರಿಶೀಲಿಸಿದರು. ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸುವರ್ಣ, ವಲಯ ಸಹಾಯಕ ಆಯುಕ್ತ ನಾಗರಾಜು, ಸಹಾಯಕ ಕಂದಾಯ ಅಧಿಕಾರಿ ಬೆಟ್ಟಯ್ಯ, ಕಿರಿಯ ಅಭಿಯಂತರ ದಯಾನಂದ್, ವರ್ಕ್ ಇನ್‌ಸ್ಪೆಕ್ಟರ್‌ಗಳು, ಹೆಲ್ತ್ ಇನ್‌ಸ್ಪೆಕ್ಟರ್‌ಗಳು ಹಾಜರಿದ್ದರು.


ಅಧಿಕಾರಿಗೆ ತರಾಟೆ

ಮೈಸೂರು: ಅಶೋಕಪುರಂನ ರಸ್ತೆಬದಿಯಲ್ಲಿ ಚರಂಡಿ ಕಲ್ಲುಚಪ್ಪಡಿಗಳು, ರಸ್ತೆಯ ನಾಮಫಲಕಗಳು ಮುರಿದು ಬಿದ್ದಿರುವುದನ್ನು ಗಮನಿಸಿದ ಮಹಾಪೌರರು, ಚರಂಡಿಗಳು ಕುಸಿದು ನೀರು ಸರಾಗವಾಗಿ ಹೋಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಣ್ಣ ಸಣ್ಣ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುವುದಿಲ್ಲವೇ? ನಾಮಫಲಕಗಳು ಸರ್ಕಾರದ ಆಸ್ತಿ ಎಂಬುದು ಗೊತ್ತಿಲ್ಲವೇ ಎಂದು ಸಂಬಂಧಪಟ್ಟ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಅಶೋಕಪುರಂ ಬಡಾವಣೆಯಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲು ಕ್ರಿಯಾಯೋಜನೆ ರೂಪಿಸುವಂತೆ ಸೂಚಿಸಿದರು.

 

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

3 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

5 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

5 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

5 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago