ಜಿಲ್ಲೆಗಳು

ಮೇಯರ್ : ಜಾ. ದಳದ ಆಕಾಂಕ್ಷಿಗಳ ನಡುವೆ ಪೈಪೋಟಿ

ಸಾ.ರಾ.ಮಹೇಶ್ ಮನವೊಲಿಕೆಗೆ ಕಸರತ್ತು ನಡೆಸುತ್ತಿರುವ ಆಕಾಂಕ್ಷಿತರು

ಕೆ.ಬಿ.ರಮೇಶನಾಯಕ

ಮೈಸೂರು: ಕೊಡು-ಕೊಳ್ಳುವಿಕೆಯ ಸೂತ್ರದಡಿ ಈ ಬಾರಿಯ ಚುನಾವಣೆಯಲ್ಲಿ ಮಹಾಪೌರ ಸ್ಥಾನವನ್ನು ಪಡೆಯುವ ನಿರೀಕ್ಷೆಯಲ್ಲಿರುವ ಜಾ.ದಳದಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಾಯಕರಿಗೆ ಹೊಸದೊಂದು ತಲೆನೋವು ಶುರುವಾಗಿದೆ.

ಮಹಾಪೌರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆ.ವಿ.ಶ್ರೀಧರ್, ಎಸ್‌ಬಿಎಂ ಮಂಜು, ಎಂ.ಡಿ.ನಾಗರಾಜು, ಪ್ರೇಮಾ ಶಂಕರೇಗೌಡ, ಅಶ್ವಿನಿ ಅನಂತು, ರಮಣಿ, ಭಾಗ್ಯ ಮಾದೇಶ್, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಶಾಸಕ ಸಾ.ರಾ.ಮಹೇಶ್ ಮನವೊಲಿಕೆಗೆ ತೀವ್ರ ಪ್ರಯತ್ನ ನಡೆಸುತ್ತಿರುವುದು ಅಭ್ಯರ್ಥಿ ಆಯ್ಕೆ ಕಗ್ಗಂಟಾಗುವ ಸಾಧ್ಯತೆ ಇದೆ.

ಜಾ.ದಳ ಹಾಗೂ ಬಿಜೆಪಿ ಮೈತ್ರಿ ಮಾತುಕತೆ ಸಫಲವಾದರೆ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವು ಮಾನದಂಡಗಳನ್ನು ಅನುಸರಿಸಿ ಮಹಾಪೌರ ಸ್ಥಾನದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಕಾಂಕ್ಷಿಗಳು ಹಾಗೂ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಮೈತ್ರಿ ವಿಚಾರ, ಮಹಾಪೌರ ಸ್ಥಾನದ ಅಭ್ಯರ್ಥಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ.

ಪತ್ನಿ ಪರ ಅಖಾಡಕ್ಕಿಳಿದ ಮಾಜಿ ಸದಸ್ಯ: ಚಾಮರಾಜ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಯಕೆ ಹೊಂದಿರುವ ನಗರಪಾಲಿಕೆ ಮಾಜಿ ಸದಸ್ಯ ಕೆ.ಮಾದೇಶ್ ಪತ್ನಿ ಭಾಗ್ಯರನ್ನು ಮಹಾಪೌರ ಸ್ಥಾನದಲ್ಲಿ ಕೂರಿಸಲು ಅಖಾಡಕ್ಕೆ ಇಳಿದಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರ ಆಪ್ತರಾಗಿರುವ ಕೆ.ಮಾದೇಶ್ ಈ ಬಾರಿ ಅವಕಾಶ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಿರಿತನ ಹಾಗೂ ಪಕ್ಷನಿಷ್ಠೆಯ ಆಧಾರದ ಮೇಲೆ ಎರಡನೇ ಬಾರಿಗೆ ಗೆದ್ದಿರುವ ಎಸ್‌ಬಿಎಂ ಮಂಜು ಮೇಲೆ ಕೆಲವು ಸದಸ್ಯರ ಒಲವು ಇದೆ. ಸಾ.ರಾ.ಮಹೇಶ್ ಅವರು ಉಪ ಚುನಾವಣೆಯಲ್ಲಿ ಎಸ್‌ಬಿಎಂ ಮಂಜುಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡಿದ್ದರು. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿರುವ ಜತೆಗೆ ಹಿರಿಯ ನಾಯಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದರಿಂದ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದರಿಂದ ಸ್ವತಂತ್ರವಾಗಿ ಗೆದ್ದು ಈಗ ಸಾ.ರಾ.ಮಹೇಶ್ ಅವರ ಮೂಲಕ ಜಾ.ದಳದೊಂದಿಗೆ ಗುರುತಿಸಿಕೊಂಡಿರುವ ಕೆ.ವಿ.ಶ್ರೀಧರ್ ಅವರು ಎಸ್‌ಬಿಎಂ ಮಂಜು ಆಯ್ಕೆಗೆ ತೊಡರಾಗುವ ಸಾಧ್ಯತೆ ಇದೆ. ಮತ್ತೊಬ್ಬ ಸದಸ್ಯ ರಮಣಿ ಹೈಕಮಾಂಡ್ ಎದುರು ಬೇಡಿಕೆ ಇಟ್ಟರೂ ಪರಿಗಣಿಸುವುದು ಅನುಮಾನವಾಗಿದೆ.

ಮಹಿಳಾಮಣಿಗಳಿಂದಲೂ ಬಿರುಸಿನ ಪೈಪೋಟಿ: ಪುರುಷರ ಬದಲಿಗೆ ಮಹಿಳೆಯರಿಗೆ ಮಹಾಪೌರ ಸ್ಥಾನ ಕೊಡುವಂತೆ ಐವರು ಮಹಿಳಾ ಸದಸ್ಯರು ಬಿರುಸಿನ ಪೈಪೋಟಿ ನೀಡುತ್ತಿದ್ದಾರೆ. ಕಳೆದ ಬಾರಿ ಪ್ರೇಮಾ ಶಂಕರೇಗೌಡ ಹಾಗೂ ಅಶ್ವಿನಿ ಅನಂತು ನಡುವೆ ತುರುಸಿನ ಸ್ಪರ್ಧೆ ನಡೆದು ಅಂತಿಮವಾಗಿ ಅಶ್ವಿನಿ ಅನಂತು ಅವರನ್ನು ಆಯ್ಕೆ ಮಾಡಿತ್ತಾದರೂ ಕಾಂಗ್ರೆಸ್, ಜಾ.ದಳ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದಾಗಿ ಜಾ.ದಳ, ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು. ಹಾಗಾಗಿ, ಈ ಬಾರಿ ಅಶ್ವಿನಿ ಅನಂತು, ಪ್ರೇಮಾ ಶಂಕರೇಗೌಡ ನಡುವೆ ಮತ್ತೆ ಪಕ್ಷದೊಳಗೆ ಪೈಪೋಟಿ ನಡೆಯುತ್ತಿದ್ದರೆ, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಕೂಡ ತಾವೇನೂ ಕಡಿಮೆ ಇಲ್ಲವೆನ್ನುವಂತೆ ನಾಯಕರ ಮೇಲೆ ಒತ್ತಡ ತಂದಿದ್ದಾರೆ.

ಮಹಾಪೌರ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಕೇಳಿದ್ದೇವೆ. ಯಾರನ್ನು ಮಾಡಬೇಕೆಂಬುದು ನಿರ್ಧಾರವಾಗಿಲ್ಲ. ಬಿಜೆಪಿ ನಮಗೆ ಮಹಾಪೌರ ಸ್ಥಾನ ಬಿಟ್ಟುಕೊಡುವ ವಿಶ್ವಾಸ ಖಚಿತವಾದ ಮೇಲೆ ಕುಳಿತು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸಾ.ರಾ.ಮಹೇಶ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಮತ್ತೊಂದು ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ.

-ಕೆ.ಟಿ.ಚೆಲುವೇಗೌಡ, ಜಾ.ದಳ ಅಧ್ಯಕ್ಷರು.

 

 

 

 

andolanait

Recent Posts

ನಾನು ಸಾಲದ ರಾಮಯ್ಯ ಎಲ್ಲ, ಅನ್ನದ ರಾಮಯ್ಯ : ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ…

3 mins ago

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…

39 mins ago

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

1 hour ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

2 hours ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

3 hours ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

4 hours ago