ಜಿಲ್ಲೆಗಳು

ಮೇಯರ್ : ಜಾ. ದಳದ ಆಕಾಂಕ್ಷಿಗಳ ನಡುವೆ ಪೈಪೋಟಿ

ಸಾ.ರಾ.ಮಹೇಶ್ ಮನವೊಲಿಕೆಗೆ ಕಸರತ್ತು ನಡೆಸುತ್ತಿರುವ ಆಕಾಂಕ್ಷಿತರು

ಕೆ.ಬಿ.ರಮೇಶನಾಯಕ

ಮೈಸೂರು: ಕೊಡು-ಕೊಳ್ಳುವಿಕೆಯ ಸೂತ್ರದಡಿ ಈ ಬಾರಿಯ ಚುನಾವಣೆಯಲ್ಲಿ ಮಹಾಪೌರ ಸ್ಥಾನವನ್ನು ಪಡೆಯುವ ನಿರೀಕ್ಷೆಯಲ್ಲಿರುವ ಜಾ.ದಳದಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಾಯಕರಿಗೆ ಹೊಸದೊಂದು ತಲೆನೋವು ಶುರುವಾಗಿದೆ.

ಮಹಾಪೌರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆ.ವಿ.ಶ್ರೀಧರ್, ಎಸ್‌ಬಿಎಂ ಮಂಜು, ಎಂ.ಡಿ.ನಾಗರಾಜು, ಪ್ರೇಮಾ ಶಂಕರೇಗೌಡ, ಅಶ್ವಿನಿ ಅನಂತು, ರಮಣಿ, ಭಾಗ್ಯ ಮಾದೇಶ್, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಶಾಸಕ ಸಾ.ರಾ.ಮಹೇಶ್ ಮನವೊಲಿಕೆಗೆ ತೀವ್ರ ಪ್ರಯತ್ನ ನಡೆಸುತ್ತಿರುವುದು ಅಭ್ಯರ್ಥಿ ಆಯ್ಕೆ ಕಗ್ಗಂಟಾಗುವ ಸಾಧ್ಯತೆ ಇದೆ.

ಜಾ.ದಳ ಹಾಗೂ ಬಿಜೆಪಿ ಮೈತ್ರಿ ಮಾತುಕತೆ ಸಫಲವಾದರೆ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವು ಮಾನದಂಡಗಳನ್ನು ಅನುಸರಿಸಿ ಮಹಾಪೌರ ಸ್ಥಾನದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಕಾಂಕ್ಷಿಗಳು ಹಾಗೂ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಮೈತ್ರಿ ವಿಚಾರ, ಮಹಾಪೌರ ಸ್ಥಾನದ ಅಭ್ಯರ್ಥಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ.

ಪತ್ನಿ ಪರ ಅಖಾಡಕ್ಕಿಳಿದ ಮಾಜಿ ಸದಸ್ಯ: ಚಾಮರಾಜ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಯಕೆ ಹೊಂದಿರುವ ನಗರಪಾಲಿಕೆ ಮಾಜಿ ಸದಸ್ಯ ಕೆ.ಮಾದೇಶ್ ಪತ್ನಿ ಭಾಗ್ಯರನ್ನು ಮಹಾಪೌರ ಸ್ಥಾನದಲ್ಲಿ ಕೂರಿಸಲು ಅಖಾಡಕ್ಕೆ ಇಳಿದಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರ ಆಪ್ತರಾಗಿರುವ ಕೆ.ಮಾದೇಶ್ ಈ ಬಾರಿ ಅವಕಾಶ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಿರಿತನ ಹಾಗೂ ಪಕ್ಷನಿಷ್ಠೆಯ ಆಧಾರದ ಮೇಲೆ ಎರಡನೇ ಬಾರಿಗೆ ಗೆದ್ದಿರುವ ಎಸ್‌ಬಿಎಂ ಮಂಜು ಮೇಲೆ ಕೆಲವು ಸದಸ್ಯರ ಒಲವು ಇದೆ. ಸಾ.ರಾ.ಮಹೇಶ್ ಅವರು ಉಪ ಚುನಾವಣೆಯಲ್ಲಿ ಎಸ್‌ಬಿಎಂ ಮಂಜುಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡಿದ್ದರು. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿರುವ ಜತೆಗೆ ಹಿರಿಯ ನಾಯಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದರಿಂದ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದರಿಂದ ಸ್ವತಂತ್ರವಾಗಿ ಗೆದ್ದು ಈಗ ಸಾ.ರಾ.ಮಹೇಶ್ ಅವರ ಮೂಲಕ ಜಾ.ದಳದೊಂದಿಗೆ ಗುರುತಿಸಿಕೊಂಡಿರುವ ಕೆ.ವಿ.ಶ್ರೀಧರ್ ಅವರು ಎಸ್‌ಬಿಎಂ ಮಂಜು ಆಯ್ಕೆಗೆ ತೊಡರಾಗುವ ಸಾಧ್ಯತೆ ಇದೆ. ಮತ್ತೊಬ್ಬ ಸದಸ್ಯ ರಮಣಿ ಹೈಕಮಾಂಡ್ ಎದುರು ಬೇಡಿಕೆ ಇಟ್ಟರೂ ಪರಿಗಣಿಸುವುದು ಅನುಮಾನವಾಗಿದೆ.

ಮಹಿಳಾಮಣಿಗಳಿಂದಲೂ ಬಿರುಸಿನ ಪೈಪೋಟಿ: ಪುರುಷರ ಬದಲಿಗೆ ಮಹಿಳೆಯರಿಗೆ ಮಹಾಪೌರ ಸ್ಥಾನ ಕೊಡುವಂತೆ ಐವರು ಮಹಿಳಾ ಸದಸ್ಯರು ಬಿರುಸಿನ ಪೈಪೋಟಿ ನೀಡುತ್ತಿದ್ದಾರೆ. ಕಳೆದ ಬಾರಿ ಪ್ರೇಮಾ ಶಂಕರೇಗೌಡ ಹಾಗೂ ಅಶ್ವಿನಿ ಅನಂತು ನಡುವೆ ತುರುಸಿನ ಸ್ಪರ್ಧೆ ನಡೆದು ಅಂತಿಮವಾಗಿ ಅಶ್ವಿನಿ ಅನಂತು ಅವರನ್ನು ಆಯ್ಕೆ ಮಾಡಿತ್ತಾದರೂ ಕಾಂಗ್ರೆಸ್, ಜಾ.ದಳ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದಾಗಿ ಜಾ.ದಳ, ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು. ಹಾಗಾಗಿ, ಈ ಬಾರಿ ಅಶ್ವಿನಿ ಅನಂತು, ಪ್ರೇಮಾ ಶಂಕರೇಗೌಡ ನಡುವೆ ಮತ್ತೆ ಪಕ್ಷದೊಳಗೆ ಪೈಪೋಟಿ ನಡೆಯುತ್ತಿದ್ದರೆ, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಕೂಡ ತಾವೇನೂ ಕಡಿಮೆ ಇಲ್ಲವೆನ್ನುವಂತೆ ನಾಯಕರ ಮೇಲೆ ಒತ್ತಡ ತಂದಿದ್ದಾರೆ.

ಮಹಾಪೌರ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಕೇಳಿದ್ದೇವೆ. ಯಾರನ್ನು ಮಾಡಬೇಕೆಂಬುದು ನಿರ್ಧಾರವಾಗಿಲ್ಲ. ಬಿಜೆಪಿ ನಮಗೆ ಮಹಾಪೌರ ಸ್ಥಾನ ಬಿಟ್ಟುಕೊಡುವ ವಿಶ್ವಾಸ ಖಚಿತವಾದ ಮೇಲೆ ಕುಳಿತು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸಾ.ರಾ.ಮಹೇಶ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಮತ್ತೊಂದು ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ.

-ಕೆ.ಟಿ.ಚೆಲುವೇಗೌಡ, ಜಾ.ದಳ ಅಧ್ಯಕ್ಷರು.

 

 

 

 

andolanait

Recent Posts

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

11 mins ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

1 hour ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

2 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

2 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

4 hours ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago