ಜಿಲ್ಲೆಗಳು

ಮೇಯರ್ : ಜಾ. ದಳದ ಆಕಾಂಕ್ಷಿಗಳ ನಡುವೆ ಪೈಪೋಟಿ

ಸಾ.ರಾ.ಮಹೇಶ್ ಮನವೊಲಿಕೆಗೆ ಕಸರತ್ತು ನಡೆಸುತ್ತಿರುವ ಆಕಾಂಕ್ಷಿತರು

ಕೆ.ಬಿ.ರಮೇಶನಾಯಕ

ಮೈಸೂರು: ಕೊಡು-ಕೊಳ್ಳುವಿಕೆಯ ಸೂತ್ರದಡಿ ಈ ಬಾರಿಯ ಚುನಾವಣೆಯಲ್ಲಿ ಮಹಾಪೌರ ಸ್ಥಾನವನ್ನು ಪಡೆಯುವ ನಿರೀಕ್ಷೆಯಲ್ಲಿರುವ ಜಾ.ದಳದಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಾಯಕರಿಗೆ ಹೊಸದೊಂದು ತಲೆನೋವು ಶುರುವಾಗಿದೆ.

ಮಹಾಪೌರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆ.ವಿ.ಶ್ರೀಧರ್, ಎಸ್‌ಬಿಎಂ ಮಂಜು, ಎಂ.ಡಿ.ನಾಗರಾಜು, ಪ್ರೇಮಾ ಶಂಕರೇಗೌಡ, ಅಶ್ವಿನಿ ಅನಂತು, ರಮಣಿ, ಭಾಗ್ಯ ಮಾದೇಶ್, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಶಾಸಕ ಸಾ.ರಾ.ಮಹೇಶ್ ಮನವೊಲಿಕೆಗೆ ತೀವ್ರ ಪ್ರಯತ್ನ ನಡೆಸುತ್ತಿರುವುದು ಅಭ್ಯರ್ಥಿ ಆಯ್ಕೆ ಕಗ್ಗಂಟಾಗುವ ಸಾಧ್ಯತೆ ಇದೆ.

ಜಾ.ದಳ ಹಾಗೂ ಬಿಜೆಪಿ ಮೈತ್ರಿ ಮಾತುಕತೆ ಸಫಲವಾದರೆ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವು ಮಾನದಂಡಗಳನ್ನು ಅನುಸರಿಸಿ ಮಹಾಪೌರ ಸ್ಥಾನದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಕಾಂಕ್ಷಿಗಳು ಹಾಗೂ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಮೈತ್ರಿ ವಿಚಾರ, ಮಹಾಪೌರ ಸ್ಥಾನದ ಅಭ್ಯರ್ಥಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ.

ಪತ್ನಿ ಪರ ಅಖಾಡಕ್ಕಿಳಿದ ಮಾಜಿ ಸದಸ್ಯ: ಚಾಮರಾಜ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಯಕೆ ಹೊಂದಿರುವ ನಗರಪಾಲಿಕೆ ಮಾಜಿ ಸದಸ್ಯ ಕೆ.ಮಾದೇಶ್ ಪತ್ನಿ ಭಾಗ್ಯರನ್ನು ಮಹಾಪೌರ ಸ್ಥಾನದಲ್ಲಿ ಕೂರಿಸಲು ಅಖಾಡಕ್ಕೆ ಇಳಿದಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರ ಆಪ್ತರಾಗಿರುವ ಕೆ.ಮಾದೇಶ್ ಈ ಬಾರಿ ಅವಕಾಶ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಿರಿತನ ಹಾಗೂ ಪಕ್ಷನಿಷ್ಠೆಯ ಆಧಾರದ ಮೇಲೆ ಎರಡನೇ ಬಾರಿಗೆ ಗೆದ್ದಿರುವ ಎಸ್‌ಬಿಎಂ ಮಂಜು ಮೇಲೆ ಕೆಲವು ಸದಸ್ಯರ ಒಲವು ಇದೆ. ಸಾ.ರಾ.ಮಹೇಶ್ ಅವರು ಉಪ ಚುನಾವಣೆಯಲ್ಲಿ ಎಸ್‌ಬಿಎಂ ಮಂಜುಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡಿದ್ದರು. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿರುವ ಜತೆಗೆ ಹಿರಿಯ ನಾಯಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದರಿಂದ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದರಿಂದ ಸ್ವತಂತ್ರವಾಗಿ ಗೆದ್ದು ಈಗ ಸಾ.ರಾ.ಮಹೇಶ್ ಅವರ ಮೂಲಕ ಜಾ.ದಳದೊಂದಿಗೆ ಗುರುತಿಸಿಕೊಂಡಿರುವ ಕೆ.ವಿ.ಶ್ರೀಧರ್ ಅವರು ಎಸ್‌ಬಿಎಂ ಮಂಜು ಆಯ್ಕೆಗೆ ತೊಡರಾಗುವ ಸಾಧ್ಯತೆ ಇದೆ. ಮತ್ತೊಬ್ಬ ಸದಸ್ಯ ರಮಣಿ ಹೈಕಮಾಂಡ್ ಎದುರು ಬೇಡಿಕೆ ಇಟ್ಟರೂ ಪರಿಗಣಿಸುವುದು ಅನುಮಾನವಾಗಿದೆ.

ಮಹಿಳಾಮಣಿಗಳಿಂದಲೂ ಬಿರುಸಿನ ಪೈಪೋಟಿ: ಪುರುಷರ ಬದಲಿಗೆ ಮಹಿಳೆಯರಿಗೆ ಮಹಾಪೌರ ಸ್ಥಾನ ಕೊಡುವಂತೆ ಐವರು ಮಹಿಳಾ ಸದಸ್ಯರು ಬಿರುಸಿನ ಪೈಪೋಟಿ ನೀಡುತ್ತಿದ್ದಾರೆ. ಕಳೆದ ಬಾರಿ ಪ್ರೇಮಾ ಶಂಕರೇಗೌಡ ಹಾಗೂ ಅಶ್ವಿನಿ ಅನಂತು ನಡುವೆ ತುರುಸಿನ ಸ್ಪರ್ಧೆ ನಡೆದು ಅಂತಿಮವಾಗಿ ಅಶ್ವಿನಿ ಅನಂತು ಅವರನ್ನು ಆಯ್ಕೆ ಮಾಡಿತ್ತಾದರೂ ಕಾಂಗ್ರೆಸ್, ಜಾ.ದಳ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದರಿಂದಾಗಿ ಜಾ.ದಳ, ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು. ಹಾಗಾಗಿ, ಈ ಬಾರಿ ಅಶ್ವಿನಿ ಅನಂತು, ಪ್ರೇಮಾ ಶಂಕರೇಗೌಡ ನಡುವೆ ಮತ್ತೆ ಪಕ್ಷದೊಳಗೆ ಪೈಪೋಟಿ ನಡೆಯುತ್ತಿದ್ದರೆ, ಲಕ್ಷ್ಮೀ ಶಿವಣ್ಣ, ನಮ್ರತಾ ರಮೇಶ್ ಕೂಡ ತಾವೇನೂ ಕಡಿಮೆ ಇಲ್ಲವೆನ್ನುವಂತೆ ನಾಯಕರ ಮೇಲೆ ಒತ್ತಡ ತಂದಿದ್ದಾರೆ.

ಮಹಾಪೌರ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಕೇಳಿದ್ದೇವೆ. ಯಾರನ್ನು ಮಾಡಬೇಕೆಂಬುದು ನಿರ್ಧಾರವಾಗಿಲ್ಲ. ಬಿಜೆಪಿ ನಮಗೆ ಮಹಾಪೌರ ಸ್ಥಾನ ಬಿಟ್ಟುಕೊಡುವ ವಿಶ್ವಾಸ ಖಚಿತವಾದ ಮೇಲೆ ಕುಳಿತು ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸಾ.ರಾ.ಮಹೇಶ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಮತ್ತೊಂದು ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ.

-ಕೆ.ಟಿ.ಚೆಲುವೇಗೌಡ, ಜಾ.ದಳ ಅಧ್ಯಕ್ಷರು.

 

 

 

 

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

9 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

11 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

15 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

19 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

22 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

22 hours ago