ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿ ಭವನದ ಮುಖ್ಯದ್ವಾರದ ಮುಂಭಾಗದಲ್ಲಿ ಜಮಾಯಿಸಿದ್ದ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನಗರದ ಜೋಡಿರಸ್ತೆಯನ್ನು ಅವೈಜ್ಞಾನಿವಾಗಿ ನಿರ್ಮಾಣ ಮಾಡಿರುವ ಕಾರಣದಿಂದ ಮಳೆ ಬಂದರೆ ಈ ರಸ್ತೆಯು ಜಲಾವೃತವಾಗಿ ತೊಂದರೆ ಉಂಟಾಗುತ್ತದೆ ಎಂದು ದೂರಿದರು.
ರಸ್ತೆ ಬದಿಯ ಬಾಬು ಜಗಜೀವನರಾಂ ಬಡಾವಣೆ, ಸೋಮಣ್ಣ ಲೇಔಟ್, ರೈಲ್ವೆ ಬಡಾವಣೆ, ಇತರ ಬಡಾವಣೆ ಜಲಾವೃತ್ತಗೊಂಡು ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಜಾಣಕುರುಡತ ತೋರುತ್ತಿದೆ ಎಂದು ಆರೋಪಿಸಿದರು.
ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಸಬೇಕು. ಸರ್ಕಾರ, ಜಿಲ್ಲಾಡಳಿತ ಇನ್ನೂ ೧೫ ದಿನಗಳೊಳಗೆ ಜೋಡಿರಸ್ತೆಯಲ್ಲಿ ಮಳೆನೀರು ನಿಲ್ಲದಂತೆ ಕ್ರಮಕೈಗೊಳ್ಳದಿದ್ದರೆ ಚಾಮರಾಜನಗರ ಬಂದ್ ಗೆ ಕರೆ ನೀಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಮರಿಯಾಲದಹುಂಡಿ ಕುಮಾರ್, ಕೆ.ಎಂ.ನಾಗರಾಜು, ಗು.ಪುರುಷೋತ್ತಮ್, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಗುರುಸ್ವಾಮಿ, ಆಕಾಶ್ ಇತರರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…