ಜಿಲ್ಲೆಗಳು

ಅಕಾಲಿಕ ಮಳೆ ತಂದ ಸಂಕಷ್ಟ: ಆಗಿಲ್ಲ ನಷ್ಟದ ಅಂದಾಜು

ಮೈಸೂರು/ಮಡಿಕೇರಿ: ಮುಂಗಾರು ಹಂಗಾಮಿನ ಆರಂಭದಲ್ಲಿ ಸುರಿದ ಭಾರಿ ಮಳೆ ಹಾಗೂ ಕೊಯ್ಲಿನ ಸಂದರ್ಭದಲ್ಲಿ ಚಂಡಮಾರುತದಿಂದಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೊಡಗಿನಲ್ಲಂತೂ ಒಂದೆಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದೆಡೆ ಅಕಾಲಿಕ ಮಳೆ ರೈತರನ್ನು ಚಿಂತೆಗೀಡು ವಾಡಿದೆ. ಈವರೆಗೂ ನಷ್ಟದ ಅಂದಾಜಿನ ಪ್ರಕ್ರಿಯೆ ಆರಂಭವಾದಂತೆ ಕಾಣುತ್ತಿಲ್ಲ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಮೈಸೂರು ಜಿಲ್ಲೆಯಲ್ಲಿ ೧೦೨೬೫೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿತ್ತು. ಗುರಿ ಮೀರಿ ೧೦೬೨೨೨ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ನೀರಾವರಿ ಪ್ರದೇಶದಲ್ಲಿ ಭತ್ತ ನಾಟಿಗೆ ಜುಲೈ-ಆಗಸ್ಟ್ ತಿಂಗಳು ಪ್ರಶಸ್ತವಾದ ಸಮಯ. ಆದರೆ, ಆ ತಿಂಗಳುಗಳಲ್ಲಿ ಹೆಚ್ಚು ಮಳೆ ಸುರಿದ ಪರಿಣಾಮ, ರೈತರು ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಭತ್ತ ನಾಟಿ ಮಾಡಿದ್ದಾರೆ. ಜೊತೆಗೆ ಭತ್ತ ಕೊಯ್ಲಿನ ಸಂದರ್ಭದಲ್ಲಿ ಕಳೆದ ವಾರ ಚಂಡಮಾರುತದಿಂದಾಗಿ ಅಕಾಲಿಕ ಮಳೆ ಸುರಿದ ಪರಿಣಾಮ ಗದ್ದೆಗಳಲ್ಲಿ ನೀರು ನಿಂತು ಭತ್ತ ನೆಲಕಚ್ಚಿದೆ. ಇದರಿಂದಾಗಿ ರೈತರಿಗೆ ಕೈಗೆ ಬಂದು ತುತ್ತು ಬಾಯಿಗಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಲ್ಕಾರು ತಿಂಗಳ ಕಾಲ ಕಷ್ಟಪಟ್ಟು ಬೆಳೆದ ಕಾರಣಕ್ಕೆ ಸಿಕ್ಕಷ್ಟು ಸಿಗಲಿ ಎಂದು ಭತ್ತ ಕಟಾವಿಗೆ ಮುಂದಾದರೆ ಕಟಾವು ಯಂತ್ರಗಳಿಗೆ ಬೇಡಿಕೆ ಹೆಚ್ಚಿದ್ದು, ಜಿಲ್ಲಾಡಳಿತ ಭತ್ತ ಕಟಾವು ಯಂತ್ರಗಳಿಗೆ ಬಾಡಿಗೆ ದರ ನಿಗದಿ ಮಾಡಿದ್ದರೂ ಅನಿವಾರ್ಯವಾಗಿ ದುಪ್ಪಟ್ಟು ಹಣ ನೀಡಿ ಭತ್ತ ಕಟಾವು ಮಾಡಿಸಬೇಕಾಗಿ ಬಂದಿದೆ.

ಅದೇ ರೀತಿ ಕೊಡಗಿನಲ್ಲಿ ಜಿಲ್ಲೆಯಾದ್ಯಂತ ಕಳೆದ ವಾರ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಹಲವು ದಿನ ಮುಂದುವರೆದ ಪರಿಣಾಮ ಭತ್ತ ಹಾಗೂ ಕಾಫಿ ಬೆಳೆಗಾರರು ತೊಂದರೆಗೆ ಒಳಗಾಗಬೇಕಾಯಿತು. ಭತ್ತ ಹಾಗೂ ಕಾಫಿ ಫಸಲು ಒಂದೇ ಬಾರಿ ಕೊಯ್ಲಿಗೆ ಬಂದಿದ್ದು ರೈತರು ಆತಂಕದ ಪರಿಸ್ಥಿತಿುಂಲ್ಲಿದ್ದಾರೆ. ಕೊ್ಂಲುು ವಾಡಿದ ಹಣ್ಣನ್ನು ಪಲ್ಟಿಂಗ್ ವಾಡಿಸಿ ಮನೆುಂ ಅಂಗಳದ ಕಣದಲ್ಲಿ ಹಾಕಲಾಗಿದ್ದು,ಅಲ್ಲಿುೂಂ ಕಾಫಿ ಗುಣಮಟ್ಟ ಕಳೆದುಕೊಳ್ಳುತ್ತಿದೆ. ಪಾರ್ಚ್‌ಮೆಂಟ್ ಕಾಫಿ ಒಣಗಿಸಲು ಹಲವು ದಿನಗಳು ಬೇಕು. ಆದರೆ, ಕಳೆದ ಒಂದು ವಾರದ ಹಿಂದೆ ಮೋಡದ ವಾತಾವರಣ ವಿದ್ದ ಹಿನ್ನೆಲೆಯಲ್ಲಿ ಕಾಫಿ ಬೀಜ ಬಣ್ಣ ಹಾಗೂ ಗುಣಮಟ್ಟ ಕಳೆದುಕೊಂಡಿರುವುದರಿಂದ ಬೆಳೆಗಾರರು ದೊಡ್ಡಮಟ್ಟದ ನಷ್ಟ ಅನುಭವಿಸುವಂತಾಗಿದೆ.


ಬೆಳೆ ನಷ್ಟ: ೧೧೩ ಕೋಟಿ ಜಮೆ

ಕೊಡಗು ಜಿಲ್ಲೆಯಲ್ಲಿ ಮೇ ಜೂನ್‌ನಲ್ಲಿ ಸುರಿದ ಮಳೆಯಿಂದ ಕೊಳೆರೋಗಕ್ಕೆ ತುತ್ತಾಗಿ ನೆಲ ಕಚ್ಚಿದ ಕಾಫಿ, ಮೆಣಸು, ಅಡಿಕೆ ಬೆಳೆಗಾರರಾದ ೩೯,೫೯೭ ರೈತರಿಗೆ ಸರ್ಕಾರದಿಂದ ಸುಮಾರು ರೂ ೧೧೩ ಕೋಟಿ ರೈತರ ಖಾತೆಗೆ ಜಮೆಯಾಗಿದೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ.


ತಾಲೂಕಿನಲ್ಲಿ ಅತಿ ಹೆಚ್ಚು ಅರೇಬಿಕಾ ಕಾಫಿ ಉತ್ಪಾದನೆಯಾಗುತ್ತಿದೆ. ಶೇ.೮೦ರಷ್ಟು ಬೆಳೆಗಾರರು ಮುಂಗಾರು ಮತ್ತು ಹಿಂಗಾರು ಮಳೆಯನ್ನೇ ನಂಬಿ ಕಾಫಿ ಕೃಷಿ ಮಾಡುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ಹಾನಿಯಾಗುತ್ತಿದೆ. ಪ್ರಸಕ್ತ ಮುಂಗಾರು ಧಾರಾಕಾರವಾಗಿ ಸುರಿದ ಪರಿಣಾಮ ಶೇ.೬೦ ರಷ್ಟು ಕಾಫಿ ಫಸಲಿಗೆ ಹಾನಿಯಾಗಿದೆ. ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

-ನವೀನ್ ಅಜ್ಜಳ್ಳಿ, ಕಾಫಿ ಬೆಳೆಗಾರರು, ಸೋಮವಾರಪೇಟೆ


ಸೈಕ್ಲೋನ್ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನೆಲ ಕಚ್ಚಿದೆ. ಗದ್ದೆಯಲ್ಲಿ ತೇವಾಂಶ ಹೆಚ್ಚಿರುವುದರಿಂದ ಬೆಲ್ಟ್ ಮಷಿನ್‌ನ ಮೂಲಕವೇ ಭತ್ತ ಕಟಾವು ಮಾಡಿಸಬೇಕಾಗಿದೆ. ಹೀಗಾಗಿ ಮಷಿನ್‌ನವರು ಕೇಳಿದಷ್ಟು ಹಣ ಕೊಟ್ಟು ಕಟಾವು ಮಾಡಿಸಬೇಕಾಗಿದೆ. ಅತಿಯಾದ ಮಳೆಯಿಂದ ಇಳುವರಿಯೂ ಕಡಿಮೆಯಾಗಿದೆ. ಈಗ ಬಿದ್ದ ಮಳೆಯಿಂದ ಗುಣಮಟ್ಟ ಕೂಡ ಹಾಳಾಗಿದೆ.

– ಸಿದ್ದೇಶ್, ಕುರುಬೂರು

andolanait

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

44 mins ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

50 mins ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

54 mins ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

57 mins ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

1 hour ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

1 hour ago