ಜಿಲ್ಲೆಗಳು

ಶಾಸಕರು ನೀಡಿದ 9 ಕೋಟಿ ರೂ. ಮೂಲ ಯಾವುದು ? ಸುದ್ದಿಗೋಷ್ಠಿಯಲ್ಲಿ ನಿಜಗುಣರಾಜು ಪ್ರಶ್ನೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ.
ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ ಇಬ್ಬರು ಮಾಲೀಕರಿಗೆ ಒಟ್ಟು ೯ ಕೋಟಿ ರೂ. ನೀಡಿದ್ದಾಗಿ ಶಾಸಕರು ಹೇಳಿಕೆ ನೀಡಿದ್ದಾರೆ. ೨೦೧೮ರಲ್ಲಿ ಚುನಾವಣೆ ಸ್ಪರ್ಧಿಸುವಾಗ ಇವರು ೩.೫೦ ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ನನ್ನ ವಿರುದ್ಧ ಬಿಜೆಪಿಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಶಾಸಕರ ಆರೋಪದಲ್ಲಿ ಹುರುಳಿಲ್ಲ. ೨೫ ಲಕ್ಷ ರೂ. ತನಕ ಮಾತ್ರ ನಗದು ವಹಿವಾಟು ಮಾಡಬೇಕಿದೆ. ಆದರೆ, ಶಾಸಕರು ಕೋಟ್ಯಂತರ ರೂ. ನೀಡಿರುವುದಾಗಿ ಹೇಳಿದ್ದಾರೆ. ಈ ಹಣ ಯಾವ ಖಾತೆಯಿಂದ ನೀಡಿದರೆಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
೯ ಕೋಟಿ ರೂ. ನೀಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗುವುದು. ಅಲ್ಲದೆ ಪತ್ರ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕರ ಕುಟುಂಬದವರು ಯಳಂದೂರು ತಾಲ್ಲೂಕಿನ ಗುಂಬಳ್ಳಿ ಬಳಿ ೧೫ ಎಕರೆ ಕಪ್ಪುಕ್ವಾರಿ ಹೊಂದಿದ್ದಾರೆ. ಉಪ್ಪಿನಮೋಳೆ ಗ್ರಾಮದಲ್ಲಿರುವ ಶಾಸಕರ ಮನೆ ಸಮೀಪವೇ ಹೊಸದಾಗಿ ಪೆಟ್ರೋಲ್ ಬಂಕ್ ತೆರೆಯಲಾಗಿದೆ. ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿ ಐಷರಾಮಿ ಮನೆ ಹೊಂದಿದ್ದಾರೆ. ಈ ಎಲ್ಲ ಆಸ್ತಿಯನ್ನು ಯಾವ ವಹಿವಾಟಿನಿಂದ ಮಾಡಿದ್ದಾರೆ ಎಂದರು.
ಸುವರ್ಣಾವತಿ ಜಲಾಶಯದ ಬಳಿ ಬಿ.ರಾಚಯ್ಯ ಪ್ರತಿಮೆ ನಿರ್ಮಾಣಕ್ಕೆ ಅನುಮೋದನೆಗಾಗಿ ತಾಂತ್ರಿಕ ಅನುಮೋದನೆಗೆ ಕಳುಹಿಸಲಾಗಿದೆ. ಹಲವು ಗ್ರಾಮಗಳಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆಯದೆಯೇ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಾನೇನು ಹಾಗೆ ಮಾಡುವುದಿಲ್ಲ ಎಂದರು.
ಕಾಡಾಧ್ಯಕ್ಷರಾಗಿ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರಿಂದ ಅನುದಾನ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದೇನೆ. ನಮಗೂ ರಸ್ತೆ ಮಾಡಿಸಲು ಅವಕಾಶವಿದೆ ಎಂದು ತಿಳಿಸಿದರು.

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

16 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

2 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

3 hours ago