ಜಿಲ್ಲೆಗಳು

ಶಾಸಕರು ನೀಡಿದ 9 ಕೋಟಿ ರೂ. ಮೂಲ ಯಾವುದು ? ಸುದ್ದಿಗೋಷ್ಠಿಯಲ್ಲಿ ನಿಜಗುಣರಾಜು ಪ್ರಶ್ನೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ.
ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ ಇಬ್ಬರು ಮಾಲೀಕರಿಗೆ ಒಟ್ಟು ೯ ಕೋಟಿ ರೂ. ನೀಡಿದ್ದಾಗಿ ಶಾಸಕರು ಹೇಳಿಕೆ ನೀಡಿದ್ದಾರೆ. ೨೦೧೮ರಲ್ಲಿ ಚುನಾವಣೆ ಸ್ಪರ್ಧಿಸುವಾಗ ಇವರು ೩.೫೦ ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ನನ್ನ ವಿರುದ್ಧ ಬಿಜೆಪಿಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಶಾಸಕರ ಆರೋಪದಲ್ಲಿ ಹುರುಳಿಲ್ಲ. ೨೫ ಲಕ್ಷ ರೂ. ತನಕ ಮಾತ್ರ ನಗದು ವಹಿವಾಟು ಮಾಡಬೇಕಿದೆ. ಆದರೆ, ಶಾಸಕರು ಕೋಟ್ಯಂತರ ರೂ. ನೀಡಿರುವುದಾಗಿ ಹೇಳಿದ್ದಾರೆ. ಈ ಹಣ ಯಾವ ಖಾತೆಯಿಂದ ನೀಡಿದರೆಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
೯ ಕೋಟಿ ರೂ. ನೀಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗುವುದು. ಅಲ್ಲದೆ ಪತ್ರ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕರ ಕುಟುಂಬದವರು ಯಳಂದೂರು ತಾಲ್ಲೂಕಿನ ಗುಂಬಳ್ಳಿ ಬಳಿ ೧೫ ಎಕರೆ ಕಪ್ಪುಕ್ವಾರಿ ಹೊಂದಿದ್ದಾರೆ. ಉಪ್ಪಿನಮೋಳೆ ಗ್ರಾಮದಲ್ಲಿರುವ ಶಾಸಕರ ಮನೆ ಸಮೀಪವೇ ಹೊಸದಾಗಿ ಪೆಟ್ರೋಲ್ ಬಂಕ್ ತೆರೆಯಲಾಗಿದೆ. ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿ ಐಷರಾಮಿ ಮನೆ ಹೊಂದಿದ್ದಾರೆ. ಈ ಎಲ್ಲ ಆಸ್ತಿಯನ್ನು ಯಾವ ವಹಿವಾಟಿನಿಂದ ಮಾಡಿದ್ದಾರೆ ಎಂದರು.
ಸುವರ್ಣಾವತಿ ಜಲಾಶಯದ ಬಳಿ ಬಿ.ರಾಚಯ್ಯ ಪ್ರತಿಮೆ ನಿರ್ಮಾಣಕ್ಕೆ ಅನುಮೋದನೆಗಾಗಿ ತಾಂತ್ರಿಕ ಅನುಮೋದನೆಗೆ ಕಳುಹಿಸಲಾಗಿದೆ. ಹಲವು ಗ್ರಾಮಗಳಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆಯದೆಯೇ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಾನೇನು ಹಾಗೆ ಮಾಡುವುದಿಲ್ಲ ಎಂದರು.
ಕಾಡಾಧ್ಯಕ್ಷರಾಗಿ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರಿಂದ ಅನುದಾನ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದೇನೆ. ನಮಗೂ ರಸ್ತೆ ಮಾಡಿಸಲು ಅವಕಾಶವಿದೆ ಎಂದು ತಿಳಿಸಿದರು.

andolanait

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

5 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

8 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

9 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

10 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

10 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

10 hours ago