ಜಿಲ್ಲೆಗಳು

ಶಾಸಕರು ನೀಡಿದ 9 ಕೋಟಿ ರೂ. ಮೂಲ ಯಾವುದು ? ಸುದ್ದಿಗೋಷ್ಠಿಯಲ್ಲಿ ನಿಜಗುಣರಾಜು ಪ್ರಶ್ನೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ.
ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ ಇಬ್ಬರು ಮಾಲೀಕರಿಗೆ ಒಟ್ಟು ೯ ಕೋಟಿ ರೂ. ನೀಡಿದ್ದಾಗಿ ಶಾಸಕರು ಹೇಳಿಕೆ ನೀಡಿದ್ದಾರೆ. ೨೦೧೮ರಲ್ಲಿ ಚುನಾವಣೆ ಸ್ಪರ್ಧಿಸುವಾಗ ಇವರು ೩.೫೦ ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ನನ್ನ ವಿರುದ್ಧ ಬಿಜೆಪಿಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಶಾಸಕರ ಆರೋಪದಲ್ಲಿ ಹುರುಳಿಲ್ಲ. ೨೫ ಲಕ್ಷ ರೂ. ತನಕ ಮಾತ್ರ ನಗದು ವಹಿವಾಟು ಮಾಡಬೇಕಿದೆ. ಆದರೆ, ಶಾಸಕರು ಕೋಟ್ಯಂತರ ರೂ. ನೀಡಿರುವುದಾಗಿ ಹೇಳಿದ್ದಾರೆ. ಈ ಹಣ ಯಾವ ಖಾತೆಯಿಂದ ನೀಡಿದರೆಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
೯ ಕೋಟಿ ರೂ. ನೀಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗುವುದು. ಅಲ್ಲದೆ ಪತ್ರ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕರ ಕುಟುಂಬದವರು ಯಳಂದೂರು ತಾಲ್ಲೂಕಿನ ಗುಂಬಳ್ಳಿ ಬಳಿ ೧೫ ಎಕರೆ ಕಪ್ಪುಕ್ವಾರಿ ಹೊಂದಿದ್ದಾರೆ. ಉಪ್ಪಿನಮೋಳೆ ಗ್ರಾಮದಲ್ಲಿರುವ ಶಾಸಕರ ಮನೆ ಸಮೀಪವೇ ಹೊಸದಾಗಿ ಪೆಟ್ರೋಲ್ ಬಂಕ್ ತೆರೆಯಲಾಗಿದೆ. ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿ ಐಷರಾಮಿ ಮನೆ ಹೊಂದಿದ್ದಾರೆ. ಈ ಎಲ್ಲ ಆಸ್ತಿಯನ್ನು ಯಾವ ವಹಿವಾಟಿನಿಂದ ಮಾಡಿದ್ದಾರೆ ಎಂದರು.
ಸುವರ್ಣಾವತಿ ಜಲಾಶಯದ ಬಳಿ ಬಿ.ರಾಚಯ್ಯ ಪ್ರತಿಮೆ ನಿರ್ಮಾಣಕ್ಕೆ ಅನುಮೋದನೆಗಾಗಿ ತಾಂತ್ರಿಕ ಅನುಮೋದನೆಗೆ ಕಳುಹಿಸಲಾಗಿದೆ. ಹಲವು ಗ್ರಾಮಗಳಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆಯದೆಯೇ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಾನೇನು ಹಾಗೆ ಮಾಡುವುದಿಲ್ಲ ಎಂದರು.
ಕಾಡಾಧ್ಯಕ್ಷರಾಗಿ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರಿಂದ ಅನುದಾನ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದೇನೆ. ನಮಗೂ ರಸ್ತೆ ಮಾಡಿಸಲು ಅವಕಾಶವಿದೆ ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

33 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

35 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

38 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

40 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

44 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

49 mins ago