ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ.
ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ ಇಬ್ಬರು ಮಾಲೀಕರಿಗೆ ಒಟ್ಟು ೯ ಕೋಟಿ ರೂ. ನೀಡಿದ್ದಾಗಿ ಶಾಸಕರು ಹೇಳಿಕೆ ನೀಡಿದ್ದಾರೆ. ೨೦೧೮ರಲ್ಲಿ ಚುನಾವಣೆ ಸ್ಪರ್ಧಿಸುವಾಗ ಇವರು ೩.೫೦ ಕೋಟಿ ರೂ. ಆಸ್ತಿ ಘೋಷಿಸಿದ್ದರು. ಈಗ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ನನ್ನ ವಿರುದ್ಧ ಬಿಜೆಪಿಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಶಾಸಕರ ಆರೋಪದಲ್ಲಿ ಹುರುಳಿಲ್ಲ. ೨೫ ಲಕ್ಷ ರೂ. ತನಕ ಮಾತ್ರ ನಗದು ವಹಿವಾಟು ಮಾಡಬೇಕಿದೆ. ಆದರೆ, ಶಾಸಕರು ಕೋಟ್ಯಂತರ ರೂ. ನೀಡಿರುವುದಾಗಿ ಹೇಳಿದ್ದಾರೆ. ಈ ಹಣ ಯಾವ ಖಾತೆಯಿಂದ ನೀಡಿದರೆಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.
೯ ಕೋಟಿ ರೂ. ನೀಡಿಕೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗುವುದು. ಅಲ್ಲದೆ ಪತ್ರ ಚಳವಳಿ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕರ ಕುಟುಂಬದವರು ಯಳಂದೂರು ತಾಲ್ಲೂಕಿನ ಗುಂಬಳ್ಳಿ ಬಳಿ ೧೫ ಎಕರೆ ಕಪ್ಪುಕ್ವಾರಿ ಹೊಂದಿದ್ದಾರೆ. ಉಪ್ಪಿನಮೋಳೆ ಗ್ರಾಮದಲ್ಲಿರುವ ಶಾಸಕರ ಮನೆ ಸಮೀಪವೇ ಹೊಸದಾಗಿ ಪೆಟ್ರೋಲ್ ಬಂಕ್ ತೆರೆಯಲಾಗಿದೆ. ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿ ಐಷರಾಮಿ ಮನೆ ಹೊಂದಿದ್ದಾರೆ. ಈ ಎಲ್ಲ ಆಸ್ತಿಯನ್ನು ಯಾವ ವಹಿವಾಟಿನಿಂದ ಮಾಡಿದ್ದಾರೆ ಎಂದರು.
ಸುವರ್ಣಾವತಿ ಜಲಾಶಯದ ಬಳಿ ಬಿ.ರಾಚಯ್ಯ ಪ್ರತಿಮೆ ನಿರ್ಮಾಣಕ್ಕೆ ಅನುಮೋದನೆಗಾಗಿ ತಾಂತ್ರಿಕ ಅನುಮೋದನೆಗೆ ಕಳುಹಿಸಲಾಗಿದೆ. ಹಲವು ಗ್ರಾಮಗಳಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆಯದೆಯೇ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಾನೇನು ಹಾಗೆ ಮಾಡುವುದಿಲ್ಲ ಎಂದರು.
ಕಾಡಾಧ್ಯಕ್ಷರಾಗಿ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ರಸ್ತೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರಿಂದ ಅನುದಾನ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದೇನೆ. ನಮಗೂ ರಸ್ತೆ ಮಾಡಿಸಲು ಅವಕಾಶವಿದೆ ಎಂದು ತಿಳಿಸಿದರು.
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…