ಜಿಲ್ಲೆಗಳು

ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಶಾಸಕ ಜಿಟಿಡಿ ಸೂಚನೆ !

ಮೈಸೂರು : ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.
ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು,  ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳು ಈಗಾಗಲೇ ಪ್ರತಿಭಟನೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು, ಹೂಟಗಳ್ಳಿ ನಗರಸಭೆಯ ಪೌರಾಯುಕ್ತರು,  ರಮ್ಮನಹಳ್ಳಿ, ಶ್ರೀರಾಂಪುರ, ಬೊಗಾದಿ ಮತ್ತು ಕಡಕೊಳ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳೊಡನೆ ಬಜೆಟ್ ಪೂರ್ವಬಾವಿ ಸಭೆಯನ್ನು ನಡೆಸಿ ಮಾತನಾಡಿದರು.
ಬೇಸಿಗೆ ಪ್ರಾರಂಭವಾಗುತ್ತಿದ್ದು, ಎಲ್ಲಿಯು ನೀರಿನ ಸಮಸ್ಯೆ ಉದ್ಬವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಕಬಿನಿಯಿಂದ ತಳೂರು ಯೋಜನೆಗೆ ಹೆಚ್ಚುವರಿ ನೀರು ನೀಡುವಂತೆ ತಿಳಿಸಿದರು.
ವಿಜಯನಗರ ೩ನೇ ಹಂತದಲ್ಲಿ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ಇಲ್ಲದೆ ಪ್ರಾರಂಭ ಮಾಡುತ್ತಿರುವುದಾಗಿ ದೂರುಗಳು ಬಂದಿದ್ದು, ಎಲ್ಲಾ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ನೀಡುವ ಬಗ್ಗೆ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಒಳಚರಂಡಿ ನೀರು, ಮಳೆ ನೀರುಚರಂಡಿಯಲ್ಲಿ ಹರಿಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು. ಖಾಸಗಿ ಬಡಾವಣೆಗಳನ್ನು ಹಸ್ತಾಂತರ ಮಾಡಿಕೊಳ್ಳುವಾಗ ಬಡಾವಣೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ, ಯಾವ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂಬುದುರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಈ ಸ್ವತ್ತನ್ನು ಕೂಡಲೇ ನೀಡುವಂತೆ ಹಾಗೂ ಪಾಲಿಕೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಅನುದಾನವನ್ನು ಮೀಸಲಿಡುವಂತೆ ಸೂಚಿಸಿದರು.
ಸಭೆಯಲ್ಲಿ ಮುಖಂಡರಾದ ಹೆಚ್.ಸಿ.ರಾಜು, ಹೂಟಗಳ್ಳಿ ಸುರೇಶ್, ಮಹೇಶ್ ಸೇರಿದಂತೆ,  ಪಾಲಿಕೆ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಷರಿಫ್, ಪಿ.ಡಿ. ಶುಭ, ಅಧೀಕ್ಷಕ ಅಭಿಯಂತರರಾದ ಸಿಂಧು, ಪೌರಾಯುಕ್ತ ಸಂದೀಪ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಬಸವರಾಜು, ಶ್ರೀಧರ್, ನರಸಿಂಹಮೂರ್ತಿ, ದೀಪಾ ಹಾಜರಿದ್ದರು.
andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago