ಜಿಲ್ಲೆಗಳು

ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಶಾಸಕ ಜಿಟಿಡಿ ಸೂಚನೆ !

ಮೈಸೂರು : ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.
ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು,  ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳು ಈಗಾಗಲೇ ಪ್ರತಿಭಟನೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು, ಹೂಟಗಳ್ಳಿ ನಗರಸಭೆಯ ಪೌರಾಯುಕ್ತರು,  ರಮ್ಮನಹಳ್ಳಿ, ಶ್ರೀರಾಂಪುರ, ಬೊಗಾದಿ ಮತ್ತು ಕಡಕೊಳ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳೊಡನೆ ಬಜೆಟ್ ಪೂರ್ವಬಾವಿ ಸಭೆಯನ್ನು ನಡೆಸಿ ಮಾತನಾಡಿದರು.
ಬೇಸಿಗೆ ಪ್ರಾರಂಭವಾಗುತ್ತಿದ್ದು, ಎಲ್ಲಿಯು ನೀರಿನ ಸಮಸ್ಯೆ ಉದ್ಬವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಕಬಿನಿಯಿಂದ ತಳೂರು ಯೋಜನೆಗೆ ಹೆಚ್ಚುವರಿ ನೀರು ನೀಡುವಂತೆ ತಿಳಿಸಿದರು.
ವಿಜಯನಗರ ೩ನೇ ಹಂತದಲ್ಲಿ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ಇಲ್ಲದೆ ಪ್ರಾರಂಭ ಮಾಡುತ್ತಿರುವುದಾಗಿ ದೂರುಗಳು ಬಂದಿದ್ದು, ಎಲ್ಲಾ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ನೀಡುವ ಬಗ್ಗೆ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಒಳಚರಂಡಿ ನೀರು, ಮಳೆ ನೀರುಚರಂಡಿಯಲ್ಲಿ ಹರಿಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು. ಖಾಸಗಿ ಬಡಾವಣೆಗಳನ್ನು ಹಸ್ತಾಂತರ ಮಾಡಿಕೊಳ್ಳುವಾಗ ಬಡಾವಣೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ, ಯಾವ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂಬುದುರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಈ ಸ್ವತ್ತನ್ನು ಕೂಡಲೇ ನೀಡುವಂತೆ ಹಾಗೂ ಪಾಲಿಕೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಅನುದಾನವನ್ನು ಮೀಸಲಿಡುವಂತೆ ಸೂಚಿಸಿದರು.
ಸಭೆಯಲ್ಲಿ ಮುಖಂಡರಾದ ಹೆಚ್.ಸಿ.ರಾಜು, ಹೂಟಗಳ್ಳಿ ಸುರೇಶ್, ಮಹೇಶ್ ಸೇರಿದಂತೆ,  ಪಾಲಿಕೆ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಷರಿಫ್, ಪಿ.ಡಿ. ಶುಭ, ಅಧೀಕ್ಷಕ ಅಭಿಯಂತರರಾದ ಸಿಂಧು, ಪೌರಾಯುಕ್ತ ಸಂದೀಪ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಬಸವರಾಜು, ಶ್ರೀಧರ್, ನರಸಿಂಹಮೂರ್ತಿ, ದೀಪಾ ಹಾಜರಿದ್ದರು.
andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

10 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

11 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

11 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

12 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

12 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

16 hours ago