ಜಿಲ್ಲೆಗಳು

ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಶಾಸಕ ಜಿಟಿಡಿ ಸೂಚನೆ !

ಮೈಸೂರು : ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.
ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು,  ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳು ಈಗಾಗಲೇ ಪ್ರತಿಭಟನೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು, ಹೂಟಗಳ್ಳಿ ನಗರಸಭೆಯ ಪೌರಾಯುಕ್ತರು,  ರಮ್ಮನಹಳ್ಳಿ, ಶ್ರೀರಾಂಪುರ, ಬೊಗಾದಿ ಮತ್ತು ಕಡಕೊಳ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳೊಡನೆ ಬಜೆಟ್ ಪೂರ್ವಬಾವಿ ಸಭೆಯನ್ನು ನಡೆಸಿ ಮಾತನಾಡಿದರು.
ಬೇಸಿಗೆ ಪ್ರಾರಂಭವಾಗುತ್ತಿದ್ದು, ಎಲ್ಲಿಯು ನೀರಿನ ಸಮಸ್ಯೆ ಉದ್ಬವಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಕಬಿನಿಯಿಂದ ತಳೂರು ಯೋಜನೆಗೆ ಹೆಚ್ಚುವರಿ ನೀರು ನೀಡುವಂತೆ ತಿಳಿಸಿದರು.
ವಿಜಯನಗರ ೩ನೇ ಹಂತದಲ್ಲಿ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ಇಲ್ಲದೆ ಪ್ರಾರಂಭ ಮಾಡುತ್ತಿರುವುದಾಗಿ ದೂರುಗಳು ಬಂದಿದ್ದು, ಎಲ್ಲಾ ಅಂಗಡಿ, ಹೋಟಲ್‌ಗಳಿಗೆ ಪರವಾನಿಗೆ ನೀಡುವ ಬಗ್ಗೆ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಒಳಚರಂಡಿ ನೀರು, ಮಳೆ ನೀರುಚರಂಡಿಯಲ್ಲಿ ಹರಿಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು. ಖಾಸಗಿ ಬಡಾವಣೆಗಳನ್ನು ಹಸ್ತಾಂತರ ಮಾಡಿಕೊಳ್ಳುವಾಗ ಬಡಾವಣೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ, ಯಾವ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂಬುದುರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಈ ಸ್ವತ್ತನ್ನು ಕೂಡಲೇ ನೀಡುವಂತೆ ಹಾಗೂ ಪಾಲಿಕೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಅನುದಾನವನ್ನು ಮೀಸಲಿಡುವಂತೆ ಸೂಚಿಸಿದರು.
ಸಭೆಯಲ್ಲಿ ಮುಖಂಡರಾದ ಹೆಚ್.ಸಿ.ರಾಜು, ಹೂಟಗಳ್ಳಿ ಸುರೇಶ್, ಮಹೇಶ್ ಸೇರಿದಂತೆ,  ಪಾಲಿಕೆ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಷರಿಫ್, ಪಿ.ಡಿ. ಶುಭ, ಅಧೀಕ್ಷಕ ಅಭಿಯಂತರರಾದ ಸಿಂಧು, ಪೌರಾಯುಕ್ತ ಸಂದೀಪ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಬಸವರಾಜು, ಶ್ರೀಧರ್, ನರಸಿಂಹಮೂರ್ತಿ, ದೀಪಾ ಹಾಜರಿದ್ದರು.
andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

2 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

4 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

6 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

8 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago