ಜಿಲ್ಲೆಗಳು

ಎಂಎಲ್‌ಎ, ಮಹಾಪೌರರಿಗಿಲ್ಲ ಸ್ಥಾನ; ಶಿಷ್ಟಾಚಾರ ಉಲ್ಲಂಘನೆ

 

ಮೈಸೂರು: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಾಪೌರ ಶಿವಕುಮಾರ್ ಹಾಗೂ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ವೇದಿಕೆಯಲ್ಲಿ ಸ್ಥಾನ ಕಲ್ಪಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಜೊತೆಗೆ ವೇದಿಕೆಯಲ್ಲಿ ಮೈಸೂರಿನ ಯಾವ ಜನಪ್ರತಿನಿಧಿಗೂ ಮನ್ನಣೆಯನ್ನು ನೀಡದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ನಿನ್ನೆತನಕವೂ ವೇದಿಕೆಯಲ್ಲಿ ಮಹಾಪೌರರು, ಸ್ಥಳೀಯ ಶಾಸಕರು ಕೂರಲು ಅವಕಾಶ ಇದೆಯೆಂದು ಹೇಳಿಕೊಂಡು ಬರಲಾಗಿತ್ತು. ಹೀಗಿದ್ದರೂ ಅಂತಿಮ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದಿಂದ ಆಗಮಿಸಿದ್ದ ಅಧಿಕಾರಿಗಳ ನಡೆಯಿಂದ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದರೊಟ್ಟಿಗೆ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ, ಅದರಲ್ಲಿ ಮೈಸೂರು ನಗರದ ಪ್ರಥಮ ಪ್ರಜೆ ಮಹಾಪೌರ ಹಾಗೂ ಸ್ಥಳೀಯ ಶಾಸಕರಿಗೆ ಮಾನ್ಯತೆ ನೀಡಬೇಕು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರೇವಹಿಸಬೇಕು. ಆದರೆ, ಮಹಾಪೌರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಬೇಕಾದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರನ್ನು ವೇದಿಕೆಯಿಂದ ದೂರವಿಡಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಶಾಸಕರಿಗೆ, ಸಂಸದರಿಗೆ, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮಮಂಡಳಿಗಳ ಅಧ್ಯಕ್ಷರಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ, ಹಾಗೂ ಶಾಸಕ ಜಿ.ಟಿ.ದೇವೇಗೌಡರು ಕೂರುವಂತಾಯಿತು. ಇದರಿಂದಾಗಿ ಮೈಸೂರಿನ ದಸರಾದ ಉದ್ಘಾಟನೆಗೆ ಮೈಸೂರಿನ ಯಾವ ಜನಪ್ರತಿನಿಧಿಗೂ ಅವಕಾಶವೇ ಇಲ್ಲದಂತಾಯಿತು. ಇದರಿಂದಾಗಿ ಅಸಮಾಧಾನಗೊಂಡ ಮಹಾಪೌರರು ಕಾರ್ಯಕ್ರಮದ ಮಧ್ಯೆ ಅಲ್ಲಿಂದ ಎದ್ದು ಹೋದರು. ಕಾರ್ಯಕ್ರಮ ಆರಂಭಕ್ಕೂ ಮುನ್ನಾ ವೇದಿಕೆಯಲ್ಲಿ ೧೩ ಆಸನಗಳನ್ನು ಹಾಕಲಾಗಿತ್ತು. ಆ ನಂತರ ಐದು ಆಸನಗಳನ್ನು ಅಲ್ಲಿಂದ ತೆಗೆದು ಹಾಕಲಾಯಿತು. ಹೀಗಾಗಿ ವೇದಿಕೆಯಲ್ಲಿ ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್‌ರಿಗೆ ಮಾತ್ರ ಆಸನವನ್ನು ಹಾಕಲಾಗಿತ್ತು. ರಾಷ್ಟ್ರಪತಿ ಬಂದಾಗ ಶಿಷ್ಟಾಚಾರದಂತೆ ರಾಜ್ಯಪಾಲರು ಇರಬೇಕು. ಉಳಿದಂತೆ ಸಿಎಂ (ಹಾವೇರಿ), ಸಚಿವ ಎಸ್.ಟಿ.ಸೋಮಶೇಖರ್ (ಯಶವಂತಪುರ), ವಿ.ಸುನಿಲ್ ಕುಮಾರ್ (ಉತ್ತರಕನ್ನಡ), ಶೋಭಾ ಕರಂದ್ಲಾಜೆ (ಚಿಕ್ಕಮಗಳೂರು), ಪ್ರಲ್ಹಾದ್ ಜೋಶಿ (ಹುಬ್ಬಳ್ಳಿ) ಜಿಲ್ಲೆಗೆ ಸೇರಿದವರಾಗಿದ್ದರಿಂದ ಮೈಸೂರಿಗರೊಬ್ಬರೂ ವೇದಿಕೆಯಲ್ಲಿ ಇರಲಿಲ್ಲ.

 

andolanait

Recent Posts

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

55 mins ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

1 hour ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

3 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

7 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

7 hours ago