ಜಿಲ್ಲೆಗಳು

ಎಂಎಲ್‌ಎ, ಮಹಾಪೌರರಿಗಿಲ್ಲ ಸ್ಥಾನ; ಶಿಷ್ಟಾಚಾರ ಉಲ್ಲಂಘನೆ

 

ಮೈಸೂರು: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಾಪೌರ ಶಿವಕುಮಾರ್ ಹಾಗೂ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ವೇದಿಕೆಯಲ್ಲಿ ಸ್ಥಾನ ಕಲ್ಪಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಜೊತೆಗೆ ವೇದಿಕೆಯಲ್ಲಿ ಮೈಸೂರಿನ ಯಾವ ಜನಪ್ರತಿನಿಧಿಗೂ ಮನ್ನಣೆಯನ್ನು ನೀಡದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ನಿನ್ನೆತನಕವೂ ವೇದಿಕೆಯಲ್ಲಿ ಮಹಾಪೌರರು, ಸ್ಥಳೀಯ ಶಾಸಕರು ಕೂರಲು ಅವಕಾಶ ಇದೆಯೆಂದು ಹೇಳಿಕೊಂಡು ಬರಲಾಗಿತ್ತು. ಹೀಗಿದ್ದರೂ ಅಂತಿಮ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದಿಂದ ಆಗಮಿಸಿದ್ದ ಅಧಿಕಾರಿಗಳ ನಡೆಯಿಂದ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದರೊಟ್ಟಿಗೆ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ, ಅದರಲ್ಲಿ ಮೈಸೂರು ನಗರದ ಪ್ರಥಮ ಪ್ರಜೆ ಮಹಾಪೌರ ಹಾಗೂ ಸ್ಥಳೀಯ ಶಾಸಕರಿಗೆ ಮಾನ್ಯತೆ ನೀಡಬೇಕು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರೇವಹಿಸಬೇಕು. ಆದರೆ, ಮಹಾಪೌರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಬೇಕಾದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರನ್ನು ವೇದಿಕೆಯಿಂದ ದೂರವಿಡಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಶಾಸಕರಿಗೆ, ಸಂಸದರಿಗೆ, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮಮಂಡಳಿಗಳ ಅಧ್ಯಕ್ಷರಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ, ಹಾಗೂ ಶಾಸಕ ಜಿ.ಟಿ.ದೇವೇಗೌಡರು ಕೂರುವಂತಾಯಿತು. ಇದರಿಂದಾಗಿ ಮೈಸೂರಿನ ದಸರಾದ ಉದ್ಘಾಟನೆಗೆ ಮೈಸೂರಿನ ಯಾವ ಜನಪ್ರತಿನಿಧಿಗೂ ಅವಕಾಶವೇ ಇಲ್ಲದಂತಾಯಿತು. ಇದರಿಂದಾಗಿ ಅಸಮಾಧಾನಗೊಂಡ ಮಹಾಪೌರರು ಕಾರ್ಯಕ್ರಮದ ಮಧ್ಯೆ ಅಲ್ಲಿಂದ ಎದ್ದು ಹೋದರು. ಕಾರ್ಯಕ್ರಮ ಆರಂಭಕ್ಕೂ ಮುನ್ನಾ ವೇದಿಕೆಯಲ್ಲಿ ೧೩ ಆಸನಗಳನ್ನು ಹಾಕಲಾಗಿತ್ತು. ಆ ನಂತರ ಐದು ಆಸನಗಳನ್ನು ಅಲ್ಲಿಂದ ತೆಗೆದು ಹಾಕಲಾಯಿತು. ಹೀಗಾಗಿ ವೇದಿಕೆಯಲ್ಲಿ ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್‌ರಿಗೆ ಮಾತ್ರ ಆಸನವನ್ನು ಹಾಕಲಾಗಿತ್ತು. ರಾಷ್ಟ್ರಪತಿ ಬಂದಾಗ ಶಿಷ್ಟಾಚಾರದಂತೆ ರಾಜ್ಯಪಾಲರು ಇರಬೇಕು. ಉಳಿದಂತೆ ಸಿಎಂ (ಹಾವೇರಿ), ಸಚಿವ ಎಸ್.ಟಿ.ಸೋಮಶೇಖರ್ (ಯಶವಂತಪುರ), ವಿ.ಸುನಿಲ್ ಕುಮಾರ್ (ಉತ್ತರಕನ್ನಡ), ಶೋಭಾ ಕರಂದ್ಲಾಜೆ (ಚಿಕ್ಕಮಗಳೂರು), ಪ್ರಲ್ಹಾದ್ ಜೋಶಿ (ಹುಬ್ಬಳ್ಳಿ) ಜಿಲ್ಲೆಗೆ ಸೇರಿದವರಾಗಿದ್ದರಿಂದ ಮೈಸೂರಿಗರೊಬ್ಬರೂ ವೇದಿಕೆಯಲ್ಲಿ ಇರಲಿಲ್ಲ.

 

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

1 min ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

12 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

17 mins ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

24 mins ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

22 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

22 hours ago