ಜಿಲ್ಲೆಗಳು

ಎಂಎಲ್‌ಎ, ಮಹಾಪೌರರಿಗಿಲ್ಲ ಸ್ಥಾನ; ಶಿಷ್ಟಾಚಾರ ಉಲ್ಲಂಘನೆ

 

ಮೈಸೂರು: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಾಪೌರ ಶಿವಕುಮಾರ್ ಹಾಗೂ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ವೇದಿಕೆಯಲ್ಲಿ ಸ್ಥಾನ ಕಲ್ಪಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಜೊತೆಗೆ ವೇದಿಕೆಯಲ್ಲಿ ಮೈಸೂರಿನ ಯಾವ ಜನಪ್ರತಿನಿಧಿಗೂ ಮನ್ನಣೆಯನ್ನು ನೀಡದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ನಿನ್ನೆತನಕವೂ ವೇದಿಕೆಯಲ್ಲಿ ಮಹಾಪೌರರು, ಸ್ಥಳೀಯ ಶಾಸಕರು ಕೂರಲು ಅವಕಾಶ ಇದೆಯೆಂದು ಹೇಳಿಕೊಂಡು ಬರಲಾಗಿತ್ತು. ಹೀಗಿದ್ದರೂ ಅಂತಿಮ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದಿಂದ ಆಗಮಿಸಿದ್ದ ಅಧಿಕಾರಿಗಳ ನಡೆಯಿಂದ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದರೊಟ್ಟಿಗೆ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ, ಅದರಲ್ಲಿ ಮೈಸೂರು ನಗರದ ಪ್ರಥಮ ಪ್ರಜೆ ಮಹಾಪೌರ ಹಾಗೂ ಸ್ಥಳೀಯ ಶಾಸಕರಿಗೆ ಮಾನ್ಯತೆ ನೀಡಬೇಕು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರೇವಹಿಸಬೇಕು. ಆದರೆ, ಮಹಾಪೌರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಬೇಕಾದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರನ್ನು ವೇದಿಕೆಯಿಂದ ದೂರವಿಡಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಶಾಸಕರಿಗೆ, ಸಂಸದರಿಗೆ, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮಮಂಡಳಿಗಳ ಅಧ್ಯಕ್ಷರಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ, ಹಾಗೂ ಶಾಸಕ ಜಿ.ಟಿ.ದೇವೇಗೌಡರು ಕೂರುವಂತಾಯಿತು. ಇದರಿಂದಾಗಿ ಮೈಸೂರಿನ ದಸರಾದ ಉದ್ಘಾಟನೆಗೆ ಮೈಸೂರಿನ ಯಾವ ಜನಪ್ರತಿನಿಧಿಗೂ ಅವಕಾಶವೇ ಇಲ್ಲದಂತಾಯಿತು. ಇದರಿಂದಾಗಿ ಅಸಮಾಧಾನಗೊಂಡ ಮಹಾಪೌರರು ಕಾರ್ಯಕ್ರಮದ ಮಧ್ಯೆ ಅಲ್ಲಿಂದ ಎದ್ದು ಹೋದರು. ಕಾರ್ಯಕ್ರಮ ಆರಂಭಕ್ಕೂ ಮುನ್ನಾ ವೇದಿಕೆಯಲ್ಲಿ ೧೩ ಆಸನಗಳನ್ನು ಹಾಕಲಾಗಿತ್ತು. ಆ ನಂತರ ಐದು ಆಸನಗಳನ್ನು ಅಲ್ಲಿಂದ ತೆಗೆದು ಹಾಕಲಾಯಿತು. ಹೀಗಾಗಿ ವೇದಿಕೆಯಲ್ಲಿ ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್‌ರಿಗೆ ಮಾತ್ರ ಆಸನವನ್ನು ಹಾಕಲಾಗಿತ್ತು. ರಾಷ್ಟ್ರಪತಿ ಬಂದಾಗ ಶಿಷ್ಟಾಚಾರದಂತೆ ರಾಜ್ಯಪಾಲರು ಇರಬೇಕು. ಉಳಿದಂತೆ ಸಿಎಂ (ಹಾವೇರಿ), ಸಚಿವ ಎಸ್.ಟಿ.ಸೋಮಶೇಖರ್ (ಯಶವಂತಪುರ), ವಿ.ಸುನಿಲ್ ಕುಮಾರ್ (ಉತ್ತರಕನ್ನಡ), ಶೋಭಾ ಕರಂದ್ಲಾಜೆ (ಚಿಕ್ಕಮಗಳೂರು), ಪ್ರಲ್ಹಾದ್ ಜೋಶಿ (ಹುಬ್ಬಳ್ಳಿ) ಜಿಲ್ಲೆಗೆ ಸೇರಿದವರಾಗಿದ್ದರಿಂದ ಮೈಸೂರಿಗರೊಬ್ಬರೂ ವೇದಿಕೆಯಲ್ಲಿ ಇರಲಿಲ್ಲ.

 

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

11 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

11 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

12 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

21 hours ago