ಜಿಲ್ಲೆಗಳು

MLA, MP, ಮಂತ್ರಿಗಳಿಗೆ ಛಾಟಿ ಏಟು !

ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ

ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್‌ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿರುವ ಧರಣಿ ೮ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ನೀವು ಬಂಡವಾಳ ಶಾಹಿಗಳು, ಮಾರ್ವಾಡಿಗಳ ಪರವಿದ್ದು, ರೈತಪರ ಕೆಲಸ ಮಾಡುತ್ತಿಲ್ಲ. ನೀವು ಎಮ್ಮೆ ಕಾಯಲು ಲಾಯಕ್ ಎಂದು ಛಾಟಿಯಿಂದ ಹೊಡೆಯುವ ಅಣಕು ಪ್ರದರ್ಶನ . ಎಚ್ಚರಿಕೆ… ಎಚ್ಚರಿಕೆ ಎಂಎಲ್‌ಎ, ಎಂಪಿ, ಮಂತ್ರಿಗಳೇ ಎಚ್ಚರಿಕೆ. ನಮ್ಮ ಕೈಯಲ್ಲಿ ಬಾರುಕೋಲು ಇದೆ. ನಮ್ಮ ಹಳ್ಳಿಗೆ ಬಂದಾಗ ಕೋಲಿನಲ್ಲಿ ಬಾರಿಸಬೇಕಾಗುತ್ತದೆ ಎಂದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಕುಮಾರ್, ಟನ್ ಕಬ್ಬಿಗೆ ೭,೫೦೦ ರೂ.ಗೂ ಹೆಚ್ಚು ಆದಾಯ ವಿದೆ. ಒಂದು ಟನ್ ಕಬ್ಬಿನಿಂದ ೧೦೦ ಲೀ. ಎಥೆನಾಲ್ ಉತ್ಪಾದನೆಯಾಗುತ್ತದೆ. ಕೇಂದ್ರ ಸರ್ಕಾರ ನಿಗದಿ  ದರ ಲೀಟರಿಗೆ ೬೫ ರೂ. ಹಾಗೂ ಟನ್ ಕಬ್ಬಿನ ಸಿಪ್ಪೆಯಿಂದ ೧೪೪ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತದೆ. ನಂತರ ಮಡ್ಡಿಯಿಂದ ಗೊಬ್ಬರ ಉತ್ಪಾದಿಸಲಾಗುತ್ತದೆ. ಎಲ್ಲ ಸೇರಿ ೭,೫೦೦ ರೂ. ಆದಾಯ ಬರುತ್ತದೆ. ವರ್ಷಕಾಲ ಕಷ್ಟಪಟ್ಟು ಇರುವ  ಬೆಳೆದ ರೈತನಿಗೆ ೩,೦೦೦ ರೂ. ಮಾತ್ರ ಕೊಡಲಾಗುತ್ತಿದೆ. ಈ ರೀತಿ ಅನ್ಯಾಯ ಏಕೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.
ನಾಲ್ಕು ತಿಂಗಳಿನಿಂದ ಕಬ್ಬು ಬೆಳೆಗಾರರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದರು ನಿದ್ದೆ ಮಾಡುತ್ತಿರುವ ರಾಜಕಾರಣಿಗಳಿಗೆ ಈ ಹೋರಾಟದ ಮೂಲಕ ಎಚ್ಚರಿಸುತ್ತಿದ್ದೇವೆ. ಇನ್ನು ಮುಂದೆಯೂ ಇದೇ ರೀತಿ ರೈತರ ಬಗ್ಗೆ ಲಘುವಾಗಿ ನಡೆದುಕೊಂಡರೆ ಅಂತಹ ಎಂಎಲ್‌ಎ, ಎಂಪಿಗಳಿಗೆ ಚುನಾವಣೆಯಲ್ಲಿ ರೈತರ ಶಕ್ತಿ ಏನೆಂದು ತಿಳಿಸಿಕೊಡುತ್ತೇವೆ ಎಂದು ಎಚ್ಚರಿಸಿದರು.
ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಕೆರೆಹುಂಡಿ ರಾಜಣ್ಣ, ಹಾಡ್ಯ ರವಿ, ಅಂಬಳೆ ಮಂಜುನಾಥ್, ಲಕ್ಷ್ಮೀಪುರ ವೆಂಕಟೇಶ್, ವರಕೋಡು ಜಯರಾಮು, ಟಿ.ರಾಮೇಗೌಡ, ಸೋನಹಳ್ಳಿ ದೊರೆಸ್ವಾಮಿ, ಬಸವಣ್ಣ, ಮಂಜುನಾಥ್, ಕುರುಬೂರು ಮಂಜು, ಮಾರ್ಬಳ್ಳಿ ನೀಲಕಂಠಪ್ಪ, ಚುಂಚರಾಯನಹುಂಡಿ ತಮ್ಮಯ್ಯಪ್ಪ, ಮಲ್ಲಪ್ಪ, ಮಾದೇವ ಸ್ವಾಮಿ, ಮುದ್ದಹಳ್ಳಿ ಶಿವಣ್ಣ, ದಿನೇಶ್, ಬಾಲಕೃಷ್ಣ ಸಂಗಾಪುರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

andolanait

Recent Posts

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

2 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

2 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

2 hours ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

2 hours ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

3 hours ago