ಜಿಲ್ಲೆಗಳು

ಸ್ವಗ್ರಾಮದಿಂದಲೇ ಶಾಸಕ ಎನ್‌. ಮಹೇಶ್‌ ಗೆ ʼಗೋ ಬ್ಯಾಕ್ʼ ಘೋಷಣೆ

ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ತಾಲ್ಲೂಕಿನ ಶಂಕನಪುರ ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಆಗಮಿಸಿದ ಶಾಸಕ ಎನ್.ಮಹೇಶ್ ಅವರು ಗ್ರಾಮಸ್ಥರ ಸಭೆ ಕರೆದು ಚರ್ಚಿಸುವ ಸಂದರ್ಭದಲ್ಲಿ ಗ್ರಾಮದ ಶೇಖರ್ ಬುದ್ದ ಹಾಗೂ ನಿಂಗರಾಜು.ಎಸ್ ಅವರು ಮಾತನಾಡಿ ನೀಡಿರುವ ಮತದಾನದ ಪಾವಿತ್ರ್ಯಕ್ಕೆ ದಕ್ಕೆ ಉಂಟಾಗಿದೆ. ನೀವು ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ವಿಫಲರಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

6 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

6 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

6 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago