ಜಿಲ್ಲೆಗಳು

ಹನೂರು: ಬೆಳ್ಳಿರಥ ನಿರ್ಮಾಣ ಸ್ಥಳಕ್ಕೆ ಶಾಸಕ ಆರ್. ನರೇಂದ್ರ ಭೇಟಿ

ಹನೂರು :ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ಬೆಳ್ಳಿರಥ ನಿರ್ಮಾಣ ಸ್ಥಳಕ್ಕೆ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ಅಭಿವೃದ್ಧಿ ಸಂಬಂಧ ಭೂಮಿ ಪೂಜೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮಲೆ ಮಾದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಬೆಳ್ಳಿ ರಥ ನಿರ್ಮಾಣ ಕಾರ್ಯದ ಬಗ್ಗೆ ಶಿಲ್ಪಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ಶ್ರೀ ಕ್ಷೇತ್ರದಲ್ಲಿ ಚಿನ್ನದ ರಥೋತ್ಸವ ರುದ್ರಾಕ್ಷಿ ಮಂಟಪ, ಬಸವ ವಾಹನ, ಮಹದೇಶ್ವರ ರ ವಾಹನದ ಸೇವೆ ಭಕ್ತರಿಗೆ ಲಭ್ಯವಿತ್ತು. ಕಾಣಿಕೆ ರೂಪದಲ್ಲಿ ಭಕ್ತಾದಿಗಳು ನೀಡಿದ್ದ ಬೆಳ್ಳಿಯನ್ನು ಗಮನದಲ್ಲಿಟ್ಟುಕೊಂಡು ಬೆಳ್ಳಿರಥ ನಿರ್ಮಾಣ ಮಾಡುವ ಉದ್ದೇಶವಿತ್ತು. ಮಲೆ ಮಾದೇಶ್ವರ ಭಕ್ತರು ಕಾಣಿಕೆಯಾಗಿ ನೀಡಿರುವ ಸುಮಾರು 530 ಕೆಜಿ ಬೆಳ್ಳಿ ಬಳಸಿಕೊಂಡು ರಥೋತ್ಸವ ನಿರ್ಮಾಣ ಮಾಡಲಾಗುತ್ತಿದೆ. ಇನ್ನು ಒಂದು ತಿಂಗಳಿನಲ್ಲಿ ರಥೋತ್ಸವ ಕಾಮಗಾರಿ ಪೂರ್ಣಗೊಳ್ಳಲಿದೆ. ತದನಂತರ ವಿಧಿ ವಿಧಾನಗಳೊಂದಿಗೆ ವಿಶೇಷ ಹೋಮ ಹವನ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಅವರನ್ನು ಕರೆತಂದು ಬೆಳ್ಳಿ ರಥವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

11 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

11 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

11 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

11 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

12 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

13 hours ago