ಹನೂರು :ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ಬೆಳ್ಳಿರಥ ನಿರ್ಮಾಣ ಸ್ಥಳಕ್ಕೆ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆ ಅಭಿವೃದ್ಧಿ ಸಂಬಂಧ ಭೂಮಿ ಪೂಜೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮಲೆ ಮಾದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಬೆಳ್ಳಿ ರಥ ನಿರ್ಮಾಣ ಕಾರ್ಯದ ಬಗ್ಗೆ ಶಿಲ್ಪಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಮಾತನಾಡಿ ಶ್ರೀ ಕ್ಷೇತ್ರದಲ್ಲಿ ಚಿನ್ನದ ರಥೋತ್ಸವ ರುದ್ರಾಕ್ಷಿ ಮಂಟಪ, ಬಸವ ವಾಹನ, ಮಹದೇಶ್ವರ ರ ವಾಹನದ ಸೇವೆ ಭಕ್ತರಿಗೆ ಲಭ್ಯವಿತ್ತು. ಕಾಣಿಕೆ ರೂಪದಲ್ಲಿ ಭಕ್ತಾದಿಗಳು ನೀಡಿದ್ದ ಬೆಳ್ಳಿಯನ್ನು ಗಮನದಲ್ಲಿಟ್ಟುಕೊಂಡು ಬೆಳ್ಳಿರಥ ನಿರ್ಮಾಣ ಮಾಡುವ ಉದ್ದೇಶವಿತ್ತು. ಮಲೆ ಮಾದೇಶ್ವರ ಭಕ್ತರು ಕಾಣಿಕೆಯಾಗಿ ನೀಡಿರುವ ಸುಮಾರು 530 ಕೆಜಿ ಬೆಳ್ಳಿ ಬಳಸಿಕೊಂಡು ರಥೋತ್ಸವ ನಿರ್ಮಾಣ ಮಾಡಲಾಗುತ್ತಿದೆ. ಇನ್ನು ಒಂದು ತಿಂಗಳಿನಲ್ಲಿ ರಥೋತ್ಸವ ಕಾಮಗಾರಿ ಪೂರ್ಣಗೊಳ್ಳಲಿದೆ. ತದನಂತರ ವಿಧಿ ವಿಧಾನಗಳೊಂದಿಗೆ ವಿಶೇಷ ಹೋಮ ಹವನ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಅವರನ್ನು ಕರೆತಂದು ಬೆಳ್ಳಿ ರಥವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…