ಜಿಲ್ಲೆಗಳು

ಶಾಸಕರಿಂದ ಕ್ವಾರಿ ಖರೀದಿ; ಬಾಕಿ ಹಣ ನೀಡದೆ ವಂಚನೆ

 ಕ್ವಾರಿ ಮಾಲೀಕ ಕಮಲೇಶ್ ಕುಮಾರ್ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನನಗೆ ಸೇರಿದ ಕಪ್ಪುಕಲ್ಲು ಕ್ವಾರಿ ಖರೀದಿಸಿ ಬಾಕಿ ಹಣ ೯ ಕೋಟಿ ರೂ.ನೀಡದೆ ವಂಚಿಸಲು ಮುಂದಾಗಿದ್ದಾರೆ ಎಂದು ಗುಜರಾತ್ ಮೂಲದ ಡಾ.ಕಮಲೇಶ್‌ಕುಮಾರ್ ಆರೋಪಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ವೆ ನಂ. ೩೩೫/೧, ೩೩೬/೪, ೩೩೬/೬ ಹಾಗೂ ೩೩೯/೧ರಲ್ಲಿ ೪ ಎಕರೆ ೩೩ ಗುಂಟೆಯಲ್ಲಿ ನಡೆಯುತ್ತಿದ್ದ ಕಪ್ಪುಕಲ್ಲು ಕ್ವಾರಿಯನ್ನು ಹಿತೇಂದ್ರಜೋಶಿ ಎಂಬುವರಿಂದ ನಾನು ಖರೀದಿಸಿದ್ದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕ್ವಾರಿಗೆ ಹೊಂದಿಕೊಂಡಂತಿದ್ದ ಸರ್ವೆ ೩೩೭ರಲ್ಲಿ ೪ ಎಕರೆ ೧ ಗುಂಟೆ ಭೂಮಿಯನ್ನು ಖರೀದಿಸಿದ್ದೇನೆ. ಈ ಭೂಮಿಯಲ್ಲಿ ನಾನು ಗಣಿಗಾರಿಕೆ ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ೨೦೨೧ ನವೆಂಬರ್‌ವರಗೆ ಗಣಿಗಾರಿಕೆ ನಡೆಸಿದ್ದೇನೆ ಎಂದು ತಿಳಿಸಿದರು.
೨೦೨೧ ಅಕ್ಟೋಬರ್‌ನಲ್ಲಿ ಸ್ಥಳೀಯರು ಕಿರಿಕಿರಿ ಮಾಡಿದರು. ಇದನ್ನು ಸರಿಪಡಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದ್ದೆ. ನೀವು ಹೊರ ರಾಜ್ಯದವರು ಹಾಗಾಗಿ ಸ್ಥಳೀಯರು ಗಣಿಗಾರಿಕೆ ನಡೆಸಲು ಬಿಡುವುದಿಲ್ಲ. ಆ ಕ್ವಾರೆಯನ್ನು ನನಗೆ ಮಾರಾಟ ಮಾಡುವಂತೆ ಶಾಸಕರು ಸೂಚಿಸಿದರು ಎಂದು ಆರೋಪಿಸಿದರು.
ನಾನು ಒಪ್ಪಿಕೊಂಡು ೧೪ ಕೋಟಿ ರೂ.ಗೆ ಕ್ರಯ ಒಪ್ಪಂದ ಮಾಡಿಕೊಂಡು ಮುಂಗಡವಾಗಿ ಶಾಸಕರಿಂದ ೧ ಲಕ್ಷ ರೂ. ಪಡೆದಿದ್ದೇನೆ. ನಂತರ ಕ್ವಾರಿ ಕ್ರಯ ಮಾಡಿಕೊಡುವಂತೆ ನನ್ನನು ಕರೆದರು. ಆ ದಿನ ನನ್ನನ್ನು ಹೆದರಿಸಿ ೧೪ ಕೋಟಿ ರೂ. ನೀಡಲು ಸಾಧ್ಯವಿಲ್ಲವೆಂದು ಧಮಕಿ ಹಾಕಿದರು ಎಂದು ಆಪಾದಿಸಿದರು.
ಬಳಿಕ ಕ್ವಾರಿಯನ್ನು ೧೨.೫೦ ಕೋಟಿ ರೂ.ಗೆ ಕ್ರಯದ ಅಗ್ರಿಮೆಂಟ್ ಮಾಡಿದಾಗ ಶಾಸಕರ ವೈಯುಕ್ತಿಕ ಬ್ಯಾಂಕ್ ಖಾತೆಯಿಂದ ನನಗೆ ೧ ಕೋಟಿ ರೂ. ಬಂದಿದೆ. ನಂತರದ ಪ್ರಕ್ರಿಯೆಯನ್ನು ಮಾಡದೆ ಕ್ವಾರಿ ಆರಂಭಿಸಿದರು. ಇದನ್ನು ಪ್ರಶ್ನಿಸಿದ ನನಗೆ ಕೊಲೆ ಬೆದರಿಕೆ ಹಾಕಿಸಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಕ್ವಾರಿ ನಿಲ್ಲಿಸಿದ್ದಾರೆ ಎಂದು ದೂರಿದರು.
೧ ಕೋಟಿ ಜೊತೆಗೆ ೨.೫೪ ಲಕ್ಷ ರೂ. ೨೦೨೨ರ ಮಾರ್ಚ್ನಲ್ಲಿ ನನಗೆ ಸಂದಾಯವಾಗಿದೆ. ಶಾಸಕರು ಬಾಕಿ ೯ ಕೋಟಿ ರೂ. ವಂಚಿಸಲು ಯತ್ನಿಸಿದ್ದಾರೆ. ಅವರ ಅಳಿಯ ಬೆದರಿಕೆ ಹಾಕಿರುವ ೫೭೧ ಕರೆಗಳ ಧ್ವನಿಮುದ್ರಿಕೆ ನನ್ನ ಬಳಿಯಿದೆ. ಶಾಸಕರ ವಿರುದ್ದ ಪ್ರಧಾನಿ, ಗೃಹ ಸಚಿವರು ಹಾಗೂ ಸಂಬಂಧಪಟ್ಟ ಎಲ್ಲರಿಗೂ ದೂರು ಸಲ್ಲಿಸುತ್ತೇನೆ ಎಂದರು

andolanait

Recent Posts

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

2 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

2 hours ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

2 hours ago

108 ವರ್ಷಗಳ ಶಾಲೆಯಲ್ಲಿ ನೂರಾರು ಮಕ್ಕಳ ಕಲರವ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…

2 hours ago

ಮೈಸೂರು ಜಿಲ್ಲೆಗೆ 13 ನಮ್ಮ ಕ್ಲಿನಿಕ್ ಮಂಜೂರು

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…

2 hours ago