ಜಿಲ್ಲೆಗಳು

ಶಾಸಕರಿಂದ ಕ್ವಾರಿ ಖರೀದಿ; ಬಾಕಿ ಹಣ ನೀಡದೆ ವಂಚನೆ

 ಕ್ವಾರಿ ಮಾಲೀಕ ಕಮಲೇಶ್ ಕುಮಾರ್ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನನಗೆ ಸೇರಿದ ಕಪ್ಪುಕಲ್ಲು ಕ್ವಾರಿ ಖರೀದಿಸಿ ಬಾಕಿ ಹಣ ೯ ಕೋಟಿ ರೂ.ನೀಡದೆ ವಂಚಿಸಲು ಮುಂದಾಗಿದ್ದಾರೆ ಎಂದು ಗುಜರಾತ್ ಮೂಲದ ಡಾ.ಕಮಲೇಶ್‌ಕುಮಾರ್ ಆರೋಪಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ವೆ ನಂ. ೩೩೫/೧, ೩೩೬/೪, ೩೩೬/೬ ಹಾಗೂ ೩೩೯/೧ರಲ್ಲಿ ೪ ಎಕರೆ ೩೩ ಗುಂಟೆಯಲ್ಲಿ ನಡೆಯುತ್ತಿದ್ದ ಕಪ್ಪುಕಲ್ಲು ಕ್ವಾರಿಯನ್ನು ಹಿತೇಂದ್ರಜೋಶಿ ಎಂಬುವರಿಂದ ನಾನು ಖರೀದಿಸಿದ್ದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕ್ವಾರಿಗೆ ಹೊಂದಿಕೊಂಡಂತಿದ್ದ ಸರ್ವೆ ೩೩೭ರಲ್ಲಿ ೪ ಎಕರೆ ೧ ಗುಂಟೆ ಭೂಮಿಯನ್ನು ಖರೀದಿಸಿದ್ದೇನೆ. ಈ ಭೂಮಿಯಲ್ಲಿ ನಾನು ಗಣಿಗಾರಿಕೆ ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ೨೦೨೧ ನವೆಂಬರ್‌ವರಗೆ ಗಣಿಗಾರಿಕೆ ನಡೆಸಿದ್ದೇನೆ ಎಂದು ತಿಳಿಸಿದರು.
೨೦೨೧ ಅಕ್ಟೋಬರ್‌ನಲ್ಲಿ ಸ್ಥಳೀಯರು ಕಿರಿಕಿರಿ ಮಾಡಿದರು. ಇದನ್ನು ಸರಿಪಡಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದ್ದೆ. ನೀವು ಹೊರ ರಾಜ್ಯದವರು ಹಾಗಾಗಿ ಸ್ಥಳೀಯರು ಗಣಿಗಾರಿಕೆ ನಡೆಸಲು ಬಿಡುವುದಿಲ್ಲ. ಆ ಕ್ವಾರೆಯನ್ನು ನನಗೆ ಮಾರಾಟ ಮಾಡುವಂತೆ ಶಾಸಕರು ಸೂಚಿಸಿದರು ಎಂದು ಆರೋಪಿಸಿದರು.
ನಾನು ಒಪ್ಪಿಕೊಂಡು ೧೪ ಕೋಟಿ ರೂ.ಗೆ ಕ್ರಯ ಒಪ್ಪಂದ ಮಾಡಿಕೊಂಡು ಮುಂಗಡವಾಗಿ ಶಾಸಕರಿಂದ ೧ ಲಕ್ಷ ರೂ. ಪಡೆದಿದ್ದೇನೆ. ನಂತರ ಕ್ವಾರಿ ಕ್ರಯ ಮಾಡಿಕೊಡುವಂತೆ ನನ್ನನು ಕರೆದರು. ಆ ದಿನ ನನ್ನನ್ನು ಹೆದರಿಸಿ ೧೪ ಕೋಟಿ ರೂ. ನೀಡಲು ಸಾಧ್ಯವಿಲ್ಲವೆಂದು ಧಮಕಿ ಹಾಕಿದರು ಎಂದು ಆಪಾದಿಸಿದರು.
ಬಳಿಕ ಕ್ವಾರಿಯನ್ನು ೧೨.೫೦ ಕೋಟಿ ರೂ.ಗೆ ಕ್ರಯದ ಅಗ್ರಿಮೆಂಟ್ ಮಾಡಿದಾಗ ಶಾಸಕರ ವೈಯುಕ್ತಿಕ ಬ್ಯಾಂಕ್ ಖಾತೆಯಿಂದ ನನಗೆ ೧ ಕೋಟಿ ರೂ. ಬಂದಿದೆ. ನಂತರದ ಪ್ರಕ್ರಿಯೆಯನ್ನು ಮಾಡದೆ ಕ್ವಾರಿ ಆರಂಭಿಸಿದರು. ಇದನ್ನು ಪ್ರಶ್ನಿಸಿದ ನನಗೆ ಕೊಲೆ ಬೆದರಿಕೆ ಹಾಕಿಸಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಕ್ವಾರಿ ನಿಲ್ಲಿಸಿದ್ದಾರೆ ಎಂದು ದೂರಿದರು.
೧ ಕೋಟಿ ಜೊತೆಗೆ ೨.೫೪ ಲಕ್ಷ ರೂ. ೨೦೨೨ರ ಮಾರ್ಚ್ನಲ್ಲಿ ನನಗೆ ಸಂದಾಯವಾಗಿದೆ. ಶಾಸಕರು ಬಾಕಿ ೯ ಕೋಟಿ ರೂ. ವಂಚಿಸಲು ಯತ್ನಿಸಿದ್ದಾರೆ. ಅವರ ಅಳಿಯ ಬೆದರಿಕೆ ಹಾಕಿರುವ ೫೭೧ ಕರೆಗಳ ಧ್ವನಿಮುದ್ರಿಕೆ ನನ್ನ ಬಳಿಯಿದೆ. ಶಾಸಕರ ವಿರುದ್ದ ಪ್ರಧಾನಿ, ಗೃಹ ಸಚಿವರು ಹಾಗೂ ಸಂಬಂಧಪಟ್ಟ ಎಲ್ಲರಿಗೂ ದೂರು ಸಲ್ಲಿಸುತ್ತೇನೆ ಎಂದರು

andolanait

Recent Posts

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

8 mins ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

38 mins ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

1 hour ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

2 hours ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

2 hours ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

3 hours ago