ಜಿಲ್ಲೆಗಳು

ಶಾಸಕರಿಂದ ಕ್ವಾರಿ ಖರೀದಿ; ಬಾಕಿ ಹಣ ನೀಡದೆ ವಂಚನೆ

 ಕ್ವಾರಿ ಮಾಲೀಕ ಕಮಲೇಶ್ ಕುಮಾರ್ ಆರೋಪ

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನನಗೆ ಸೇರಿದ ಕಪ್ಪುಕಲ್ಲು ಕ್ವಾರಿ ಖರೀದಿಸಿ ಬಾಕಿ ಹಣ ೯ ಕೋಟಿ ರೂ.ನೀಡದೆ ವಂಚಿಸಲು ಮುಂದಾಗಿದ್ದಾರೆ ಎಂದು ಗುಜರಾತ್ ಮೂಲದ ಡಾ.ಕಮಲೇಶ್‌ಕುಮಾರ್ ಆರೋಪಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ವೆ ನಂ. ೩೩೫/೧, ೩೩೬/೪, ೩೩೬/೬ ಹಾಗೂ ೩೩೯/೧ರಲ್ಲಿ ೪ ಎಕರೆ ೩೩ ಗುಂಟೆಯಲ್ಲಿ ನಡೆಯುತ್ತಿದ್ದ ಕಪ್ಪುಕಲ್ಲು ಕ್ವಾರಿಯನ್ನು ಹಿತೇಂದ್ರಜೋಶಿ ಎಂಬುವರಿಂದ ನಾನು ಖರೀದಿಸಿದ್ದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕ್ವಾರಿಗೆ ಹೊಂದಿಕೊಂಡಂತಿದ್ದ ಸರ್ವೆ ೩೩೭ರಲ್ಲಿ ೪ ಎಕರೆ ೧ ಗುಂಟೆ ಭೂಮಿಯನ್ನು ಖರೀದಿಸಿದ್ದೇನೆ. ಈ ಭೂಮಿಯಲ್ಲಿ ನಾನು ಗಣಿಗಾರಿಕೆ ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ೨೦೨೧ ನವೆಂಬರ್‌ವರಗೆ ಗಣಿಗಾರಿಕೆ ನಡೆಸಿದ್ದೇನೆ ಎಂದು ತಿಳಿಸಿದರು.
೨೦೨೧ ಅಕ್ಟೋಬರ್‌ನಲ್ಲಿ ಸ್ಥಳೀಯರು ಕಿರಿಕಿರಿ ಮಾಡಿದರು. ಇದನ್ನು ಸರಿಪಡಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದ್ದೆ. ನೀವು ಹೊರ ರಾಜ್ಯದವರು ಹಾಗಾಗಿ ಸ್ಥಳೀಯರು ಗಣಿಗಾರಿಕೆ ನಡೆಸಲು ಬಿಡುವುದಿಲ್ಲ. ಆ ಕ್ವಾರೆಯನ್ನು ನನಗೆ ಮಾರಾಟ ಮಾಡುವಂತೆ ಶಾಸಕರು ಸೂಚಿಸಿದರು ಎಂದು ಆರೋಪಿಸಿದರು.
ನಾನು ಒಪ್ಪಿಕೊಂಡು ೧೪ ಕೋಟಿ ರೂ.ಗೆ ಕ್ರಯ ಒಪ್ಪಂದ ಮಾಡಿಕೊಂಡು ಮುಂಗಡವಾಗಿ ಶಾಸಕರಿಂದ ೧ ಲಕ್ಷ ರೂ. ಪಡೆದಿದ್ದೇನೆ. ನಂತರ ಕ್ವಾರಿ ಕ್ರಯ ಮಾಡಿಕೊಡುವಂತೆ ನನ್ನನು ಕರೆದರು. ಆ ದಿನ ನನ್ನನ್ನು ಹೆದರಿಸಿ ೧೪ ಕೋಟಿ ರೂ. ನೀಡಲು ಸಾಧ್ಯವಿಲ್ಲವೆಂದು ಧಮಕಿ ಹಾಕಿದರು ಎಂದು ಆಪಾದಿಸಿದರು.
ಬಳಿಕ ಕ್ವಾರಿಯನ್ನು ೧೨.೫೦ ಕೋಟಿ ರೂ.ಗೆ ಕ್ರಯದ ಅಗ್ರಿಮೆಂಟ್ ಮಾಡಿದಾಗ ಶಾಸಕರ ವೈಯುಕ್ತಿಕ ಬ್ಯಾಂಕ್ ಖಾತೆಯಿಂದ ನನಗೆ ೧ ಕೋಟಿ ರೂ. ಬಂದಿದೆ. ನಂತರದ ಪ್ರಕ್ರಿಯೆಯನ್ನು ಮಾಡದೆ ಕ್ವಾರಿ ಆರಂಭಿಸಿದರು. ಇದನ್ನು ಪ್ರಶ್ನಿಸಿದ ನನಗೆ ಕೊಲೆ ಬೆದರಿಕೆ ಹಾಕಿಸಿದ್ದಾರೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಕ್ವಾರಿ ನಿಲ್ಲಿಸಿದ್ದಾರೆ ಎಂದು ದೂರಿದರು.
೧ ಕೋಟಿ ಜೊತೆಗೆ ೨.೫೪ ಲಕ್ಷ ರೂ. ೨೦೨೨ರ ಮಾರ್ಚ್ನಲ್ಲಿ ನನಗೆ ಸಂದಾಯವಾಗಿದೆ. ಶಾಸಕರು ಬಾಕಿ ೯ ಕೋಟಿ ರೂ. ವಂಚಿಸಲು ಯತ್ನಿಸಿದ್ದಾರೆ. ಅವರ ಅಳಿಯ ಬೆದರಿಕೆ ಹಾಕಿರುವ ೫೭೧ ಕರೆಗಳ ಧ್ವನಿಮುದ್ರಿಕೆ ನನ್ನ ಬಳಿಯಿದೆ. ಶಾಸಕರ ವಿರುದ್ದ ಪ್ರಧಾನಿ, ಗೃಹ ಸಚಿವರು ಹಾಗೂ ಸಂಬಂಧಪಟ್ಟ ಎಲ್ಲರಿಗೂ ದೂರು ಸಲ್ಲಿಸುತ್ತೇನೆ ಎಂದರು

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

5 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

6 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

6 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

7 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago