ಜಿಲ್ಲೆಗಳು

ಸಂಸದ ಪ್ರತಾಪ್‌ಸಿಂಹ ವಿರುದ್ಧ ಶಾಸಕ ಪುಟ್ಟರಾಜು ಕಿಡಿ

ಲಾರಿಗಳ ಸಂಚಾರದಿAದ ಹಾಳಾದ ರಸ್ತೆಗಳ ಅಭಿವೃದ್ಧಿಪಡಿಸಲು ಆಗ್ರಹ

ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಅಪ್ಪುನಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಗಾಗಿ ಮಣ್ಣು, ಕಲ್ಲಿನ ಕಚ್ಚಾವಸ್ತುಗಳ ಸಾಗಾಣಿಕೆ ಮಾಡಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಸೇರಿದಂತೆ ಹಲವಾರು ರಸ್ತೆಗಳು ಸಂಪೂರ್ಣವಾಗಿ ಅಧ್ವಾನಗೊಂಡಿವೆ. ರಸ್ತೆ ನಿರ್ಮಾಣದ ವೇಳೆ ಲಾರಿಗಳನ್ನು ತಡೆದಂತಹ ಸಂದರ್ಭದಲ್ಲಿ ಮೈಸೂರು ಸಂಸದ ಪ್ರತಾಪ್‌ಸಿಂಹ ನನಗೆ ದೂರವಾಣಿ ಕರೆ ಮಾಡಿ, ಅಣ್ಣಾ ಲಾರಿ ಸಂಚಾರದಿAದ ಹಗದೆಟ್ಟ ರಸ್ತೆಗಳನ್ನು ಅಭಿವೃದ್ಧಿ ಮಾಡಿಸುವುದಾಗಿ ಭರವಸೆ ನೀಡಿ ರಸ್ತೆ ಅಭಿವೃದ್ಧಿಪಡಿಸುವುದಾಗಿ ಅಗ್ರಿಮೆಂಟ್ ಸಹ ಮಾಡಿಕೊಟ್ಟಿದ್ದರು. ಆದರೆ, ಇದೀಗ ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದರೂ ಸಹ ಈವರೆಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಿಲ್ಲ. ಮೈಸೂರು-ಬೆಂಗಳೂರು ರಸ್ತೆ ಅಭಿವೃದ್ಧ್ದಿಪಡಿಸುವುದಕ್ಕೆ ನನ್ನ ವಿರೋಧವಿಲ್ಲ. ನಾನು ಸಂಸದನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮೈಸೂರು-ಬೆಂಗಳೂರು ರಸ್ತೆಯನ್ನು ಅಭಿವೃದ್ದಿಪಡಿಸುವಂತೆ ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದೇ ನಾನು. ಒಂದು ವಾರದೊಳಗೆ ನಮ್ಮ ವ್ಯಾಪ್ತಿಯಲ್ಲಿ ಲಾರಿ ಸಂಚಾರದಿAದ ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧ್ದಿಪಡಿಸದಿದ್ದರೆ ಸಂಸದ ಪ್ರತಾಸ್‌ಸಿಂಹ ಅವರ ಮನೆಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ:

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯೊಂದು ಅವೈಜ್ಞಾನಿಕವಾದ ಕಾಮಗಾರಿಯಾಗಿದೆ. ಈ ಹೆದ್ದಾರಿ ಕಾಮಗಾರಿಯಿಂದ ಮಂಡ್ಯ ಭಾಗದ ಜನರ ವ್ಯಾಪಾರ ವೈಹಿವಾಟಿಗೆ ತೊಡಕಾದಂತಾಗಿದೆ. ಹೆದ್ದಾರಿ ಕಾಮಗಾರಿ ಸಾಕಷ್ಟು ಕಳಪೆ ಗುಣಮಟ್ಟದಿಂದ ಕೂಡಿದೆ. ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ನಡೆದಿದ್ದ ಬೆಂಗಳೂರು-ಮೈಸೂರು ಮುಖ್ಯರಸ್ತೆಯ ಗುಣಮಟ್ಟದಷ್ಟು ಈ ಕಾಮಗಾರಿ ಗುಣಮಟ್ಟವಿಲ್ಲ. ಸಂಪೂರ್ಣವಾಗಿ ಕಳಪೆಯಿಂದ ಕೂಡಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ೨೦೨೩ಕ್ಕೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜಾ.ದಳ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜಾ.ದಳ ಪರವಾದ ಒಲವು ಇದೆ ಎನ್ನುವುದಕ್ಕೆ ಕೋಲಾರದಲ್ಲಿ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮವೇ ಸಾಕ್ಷಿ. ೨೦೨೩ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗೋದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪಕ್ಷ ಬಿಟ್ಟು ಹೋಗಿದ್ದ ನಾಯಕರೆಲ್ಲ ಮತ್ತೆ ಪಕ್ಷಕ್ಕೆ ವಾಪಸ್ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಜಾ.ದಳ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಕೆಆರ್‌ಎಸ್ ಬೃಂದಾವನಕ್ಕೆ ಚಿರತೆ ನುಗ್ಗಿದೆ ಎನ್ನುವ ಕಾರಣಕ್ಕೆ ಪ್ರವಾಸಿಗರನ್ನು ನಿಷೇಧಿಸಿರುವುದು ಸರಿಯಲ್ಲ. ರಾಜ್ಯ, ಹೊರ ರಾಜ್ಯಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬೃಂದಾವನಕ್ಕೆ ನುಗ್ಗಿರುವ ಚಿರತೆಯನ್ನು ಹೊರಗಡೆ ಓಡಿಸಿ ಬೃಂದಾವನವನ್ನು ತೆರೆಯುವುದನ್ನು ಬಿಟ್ಟು ಗಾರ್ಡ್ನ್ ಮುಚ್ಚಿರುವುದು ಸರಿಯಲ್ಲ. ಈ ಭಾಗದ ಪ್ರವಾಸೋಧ್ಯವವನ್ನು ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶದಿಂದ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಕೆಆರ್‌ಎಸ್‌ಗೆ ಡಿಸ್ನಿ ಲ್ಯಾಂಡ್ ತರಲು ಮುಂದಾಗಿದ್ದೆವು. ಡಿಸ್ನಿಲ್ಯಾಂಡ್ ಬಂದಿದ್ದರೆ ಈ ಭಾಗದ ಜನರ ಬದುಕು ಹಸನಾಗುತ್ತಿತ್ತು. ಕೆಲವರು ಅದಕ್ಕೂ ವಿರೋಧ ವ್ಯಕ್ತಪಡಿಸಿ ನಿಲ್ಲಿಸಿದರು. ನಿಲ್ಲಿಸಿದವರಿಗೆ ಭಗವಂತ ಒಳ್ಳೆಯದು ಮಾಡಲ್ಲ ಬಿಡಿ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಗೋಷ್ಠಿಯಲ್ಲಿ ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಅಶೋಕ್, ಪುರಸಭೆ ಅಧ್ಯಕ್ಷೆ ಅರ್ಚನಚಂದ್ರು, ಸದಸ್ಯರಾದ ಶಿವಣ್ಣ. ಬಾಬು, ಚಂದ್ರ, ಶಿವಕುಮಾರ್, ಇಮ್ರಾನ್, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ಎಸ್.ನಾರಾಯಣಗೌಡ ಉಪಸ್ಥಿತರಿದ್ದರು.

andolana

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

3 mins ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

36 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

2 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

13 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

16 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

16 hours ago