ಚಿತ್ರ: ಸುತ್ತೂರು ನಂಜುಂಡ ನಾಯಕ
ಸುತ್ತೂರು: ವರುಣ ಕ್ಷೇತ್ರಕ್ಕೆ ಸೇರಿರುವ ಸಿದ್ದರಾಮಯ್ಯ ಹುಂಡಿ ಶಾಲೆಗೆ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಕೆಲಹೊತ್ತು ಮಕ್ಕಳ ಜೊತೆಯಲ್ಲಿ ಸಂದರ್ಶನ ನಡೆಸಿದರು.
ನಂತರ ಅವರು ಮಾತನಾಡಿ, ನಾನು ಶಾಲೆಗೆ ಸೇರಿದ ಶಾಲೆ ಇದು ನಾನು ನಿಮ್ಮ ಹಾಗೆ ಇಲ್ಲೇ ಅಕ್ಷರ ಅಭ್ಯಾಸ ಕಲಿತಿದ್ದೆ ಅದೇ ರೀತಿ ಈಗ ನಿಮ್ಮ ಜೊತೆ ನಾನು ನಮ್ಮ ಶಾಲೆಗೆ ಬಂದಿದ್ದೇನೆ. ನಿಮ್ಮ ಜೊತೆ ಕೆಲ ಹೊತ್ತು ನಾನು ಕಲಿತ ಅಭ್ಯಾಸವನ್ನು ಮೆಲಕು ಹಾಕಿದ್ದೇನೆ. ನಿಮ್ಮ ವಯಸ್ಸಿನಲ್ಲಿ ಆಟವಾಡುವ ಮನಸ್ಸಿದೆ. ನೀವೆಲ್ಲರೂ ಉತ್ತಮ ಶಿಕ್ಷಣ ಪಡೆದು ಇಡೀ ದೇಶಕ್ಕೆ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕೆಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯರಾದ ಬಸವರಾಜಣ್ಣ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಕೆಂಪಿರಯ್ಯ. ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಪುಟ್ಟಣ್ಣ, ಎಡಕೋಳ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ್, ವರುಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಯ ಉಂಡಿ ರವಿ ಮಾದೇವ ಶಾಲಾ ಶಿಕ್ಷಕರು, ಯಾಂದಳ್ಳಿ ಶಂಕರ್, ಚೋರ್ನಳ್ಳಿ ರಾಜು, ದೇವಯ್ಯ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮದ ಮುಖಂಡರು ಹಾಜರಿದ್ದರು
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…