ಚಿತ್ರ: ಸುತ್ತೂರು ನಂಜುಂಡ ನಾಯಕ
ಸುತ್ತೂರು: ವರುಣ ಕ್ಷೇತ್ರಕ್ಕೆ ಸೇರಿರುವ ಸಿದ್ದರಾಮಯ್ಯ ಹುಂಡಿ ಶಾಲೆಗೆ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಕೆಲಹೊತ್ತು ಮಕ್ಕಳ ಜೊತೆಯಲ್ಲಿ ಸಂದರ್ಶನ ನಡೆಸಿದರು.
ನಂತರ ಅವರು ಮಾತನಾಡಿ, ನಾನು ಶಾಲೆಗೆ ಸೇರಿದ ಶಾಲೆ ಇದು ನಾನು ನಿಮ್ಮ ಹಾಗೆ ಇಲ್ಲೇ ಅಕ್ಷರ ಅಭ್ಯಾಸ ಕಲಿತಿದ್ದೆ ಅದೇ ರೀತಿ ಈಗ ನಿಮ್ಮ ಜೊತೆ ನಾನು ನಮ್ಮ ಶಾಲೆಗೆ ಬಂದಿದ್ದೇನೆ. ನಿಮ್ಮ ಜೊತೆ ಕೆಲ ಹೊತ್ತು ನಾನು ಕಲಿತ ಅಭ್ಯಾಸವನ್ನು ಮೆಲಕು ಹಾಕಿದ್ದೇನೆ. ನಿಮ್ಮ ವಯಸ್ಸಿನಲ್ಲಿ ಆಟವಾಡುವ ಮನಸ್ಸಿದೆ. ನೀವೆಲ್ಲರೂ ಉತ್ತಮ ಶಿಕ್ಷಣ ಪಡೆದು ಇಡೀ ದೇಶಕ್ಕೆ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕೆಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯರಾದ ಬಸವರಾಜಣ್ಣ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಕೆಂಪಿರಯ್ಯ. ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಪುಟ್ಟಣ್ಣ, ಎಡಕೋಳ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ್, ವರುಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಯ ಉಂಡಿ ರವಿ ಮಾದೇವ ಶಾಲಾ ಶಿಕ್ಷಕರು, ಯಾಂದಳ್ಳಿ ಶಂಕರ್, ಚೋರ್ನಳ್ಳಿ ರಾಜು, ದೇವಯ್ಯ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮದ ಮುಖಂಡರು ಹಾಜರಿದ್ದರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…
ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…