ಜಿಲ್ಲೆಗಳು

ಮೂಡಾ ಸದಸ್ಯರಾಗಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ನಾಮ ನಿರ್ದೇಶನ

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಎ.ಎಚ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ ೩(೩)(ಡಿ) ಅನ್ವಯ ಕಲಂ ೩(೪)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ರವರನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಂದು ವರ್ಷಗಳ ಹಿಂದೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರನ್ನು ನೇಮಿಸಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆ ಕ್ಷಣದಲ್ಲಿ ತಪ್ಪಿತ್ತು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

17 mins ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

4 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

4 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

4 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

4 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

5 hours ago