ಹನೂರು : ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರಂದು ಬೃಹತ್ ಋಣಸಂದಾಯ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಹನೂರು ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ
ಜನಧ್ವನಿ ಬಿ. ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರ ವ್ಯಾಪ್ತಿಯಲ್ಲಿ ಗುಡ್ಡಗಾಡು ಪ್ರದೇಶಗಳು ಹೆಚ್ಚಿರುವುದರಿಂದ ಈ ಪ್ರದೇಶದಲ್ಲಿನ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಋಣ ಸಂದಾಯ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ನುರಿತ ವೈದ್ಯರು ಆಗಮಿಸಲಿದ್ದಾರೆ.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು : ಬಿಪಿ ಮತ್ತು ಶುಗರ್ ತಪಾಸಣೆ’ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ,ಡಯಾಬಿಟಿಕ್ ರೆಟಿನಪಥಿ, ಎಲ್ಲಾ ರೀತಿಯ ಕ್ಯಾನ್ಸರ್ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ,ಹೃದಯ ರೋಗ ತಪಾಸಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆ, ಇಸಿಜಿ ಎಕೋ ಉಚಿತ ತಪಾಸಣೆ,ಫೈಲ್ಸ್ ಮತ್ತು ಹರ್ನಿಯಾ ಉಚಿತ ಶಸ್ತ್ರಚಿಕಿತ್ಸೆ,ಮೂಳೆ ಮತ್ತು ಕೀಲು ತಪಾಸಣೆ, ಉಚಿತ ಎಕ್ಸ್ ರೇ, ಅಪೆಂಡಿಕ್ಸ್ ಕಿಡ್ನಿ ಸ್ಟೋನ್ ಉಚಿತ ಸ್ಕ್ಯಾನಿಂಗ್,ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಮೆಮೋ ಗ್ರಾಫಿಕ್, ಗರ್ಭಕೋಶ ತಪಾಸಣೆ,ಕಿವಿ ಮತ್ತು ಮಾತಿನ ತೊಂದರೆಯ ಪರೀಕ್ಷೆ ಮಾಡಿ ಉಚಿತವಾಗಿ 1ಸಾವಿರ ಜನರಿಗೆ ಶ್ರವಣ ಯಂತ್ರ ವಿತರಣೆ,ಮೂಗಿನ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆ ಗಂಟಲಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ನುರಿತ ಮಕ್ಕಳ ತಜ್ಞರಿಂದ ಮಕ್ಕಳಿಗೆ ಉಚಿತ ತಪಾಸಣೆ, ಉಚಿತ ಆಯುರ್ವೇದ ತಪಾಸಣೆ ಮತ್ತು ಔಷಧಿ ವಿತರಣೆ, ರಕ್ತದಾನ ಶಿಬಿರ ಉಚಿತ ಡಯಾಬಿಟಿಕ್ ರೆಟಿನೋಪತಿ ಪರೀಕ್ಷೆ ಮತ್ತು ಲೇಸರ್ ಟ್ರೀಟ್ ಮೆಂಟ್ ಗ್ಲೊಕೊಮಾ ಪರೀಕ್ಷೆ ಮತ್ತು ಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಬಿಜೆಪಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ .
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…