ಜಿಲ್ಲೆಗಳು

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಋಣ ಸಂದಾಯ ಆರೋಗ್ಯ ಶಿಬಿರ

ಹನೂರು :  ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರಂದು ಬೃಹತ್ ಋಣಸಂದಾಯ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಹನೂರು ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ
ಜನಧ್ವನಿ ಬಿ. ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯಲ್ಲಿ ಗುಡ್ಡಗಾಡು ಪ್ರದೇಶಗಳು ಹೆಚ್ಚಿರುವುದರಿಂದ ಈ ಪ್ರದೇಶದಲ್ಲಿನ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಋಣ ಸಂದಾಯ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ನುರಿತ ವೈದ್ಯರು ಆಗಮಿಸಲಿದ್ದಾರೆ.

ಶಿಬಿರದಲ್ಲಿ ಸಿಗುವ ಸೌಲಭ್ಯಗಳು : ಬಿಪಿ ಮತ್ತು ಶುಗರ್ ತಪಾಸಣೆ’ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ,ಡಯಾಬಿಟಿಕ್ ರೆಟಿನಪಥಿ, ಎಲ್ಲಾ ರೀತಿಯ ಕ್ಯಾನ್ಸರ್ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ,ಹೃದಯ ರೋಗ ತಪಾಸಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆ, ಇಸಿಜಿ ಎಕೋ ಉಚಿತ ತಪಾಸಣೆ,ಫೈಲ್ಸ್ ಮತ್ತು ಹರ್ನಿಯಾ ಉಚಿತ ಶಸ್ತ್ರಚಿಕಿತ್ಸೆ,ಮೂಳೆ ಮತ್ತು ಕೀಲು ತಪಾಸಣೆ, ಉಚಿತ ಎಕ್ಸ್ ರೇ, ಅಪೆಂಡಿಕ್ಸ್ ಕಿಡ್ನಿ ಸ್ಟೋನ್ ಉಚಿತ ಸ್ಕ್ಯಾನಿಂಗ್,ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಮೆಮೋ ಗ್ರಾಫಿಕ್, ಗರ್ಭಕೋಶ ತಪಾಸಣೆ,ಕಿವಿ ಮತ್ತು ಮಾತಿನ ತೊಂದರೆಯ ಪರೀಕ್ಷೆ ಮಾಡಿ ಉಚಿತವಾಗಿ 1ಸಾವಿರ ಜನರಿಗೆ ಶ್ರವಣ ಯಂತ್ರ ವಿತರಣೆ,ಮೂಗಿನ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆ ಗಂಟಲಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ನುರಿತ ಮಕ್ಕಳ ತಜ್ಞರಿಂದ ಮಕ್ಕಳಿಗೆ ಉಚಿತ ತಪಾಸಣೆ, ಉಚಿತ ಆಯುರ್ವೇದ ತಪಾಸಣೆ ಮತ್ತು ಔಷಧಿ ವಿತರಣೆ, ರಕ್ತದಾನ ಶಿಬಿರ ಉಚಿತ ಡಯಾಬಿಟಿಕ್ ರೆಟಿನೋಪತಿ ಪರೀಕ್ಷೆ ಮತ್ತು ಲೇಸರ್ ಟ್ರೀಟ್ ಮೆಂಟ್ ಗ್ಲೊಕೊಮಾ ಪರೀಕ್ಷೆ ಮತ್ತು ಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಬಿಜೆಪಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ .

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago