ಜಿಲ್ಲೆಗಳು

ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ : ಒಬಿಸಿ ರಾಜ್ಯಾಧ್ಯಕ್ಷ ನೆ. ಲ ನರೇಂದ್ರ ಬಾಬು

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ರಾಜ್ಯಾದ್ಯಂತ ಸೆ.17 ರಿಂದ ಅ.2 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ ನರೇಂದ್ರ ಬಾಬು ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ದೇಶದ ಜನತೆಗೆ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಪಡೆದ ನಾಯಕರಾಗಿದ್ದಾರೆ. ಈ ದಿಸೆಯಲ್ಲಿ ಅವರ ಹುಟ್ಟು ಹಬ್ಬದ ಹಿನ್ನಲೆ ರಾಜ್ಯದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ರಾಷ್ಟ್ರಕ್ಕೆ ಸಂದೇಶ ನೀಡುವ ವಿಶೇಷ ಕಾರ್ಯಕ್ರಮವಾಗಿದ್ದು, ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ವಿಶೇಷವಾಗಿ ಅರಳಿಮರದ ಸಸಿ ನೆಡಲಾಗುತ್ತದೆಯಲ್ಲದೇ ಬೀಜದ ಹುಂಡೆ ಬಿತ್ತನೆ ಮಾಡಲಾಗುತ್ತದೆ.

ಅಲ್ಲದೇ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಬಿಸಿ ಮೋರ್ಚಾದ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಪಟ್ಟಣದ ಆರ್.ಎಸ್ ದೊಡ್ಡಿ ಬಳಿಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 14 ಕ್ಕೂ ಆಸ್ಪತ್ರೆಯ 200ಕ್ಕೂ ವೈದ್ಯ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ಒಬಿಸಿ ಮೋಚಾದ ರಾಷ್ಟ್ರಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಅರುಣಾ ದೇವಿ ಹಾಗೂ ರಾಜ್ಯದ ಹಿರಿಯ ನಾಯಕರು ಆಗಮಿಸಲಿದ್ದಾರೆ. ಆಗಮಿಸುವ ಇವರನ್ನು ಪೂರ್ಣ ಕುಂಭಮೇಳದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಂದರ್, ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಸೇವಾ ಸಂಚಾಲಕ ರಾಮಚಂದ್ರು, ವಿವಿಧ ಮಂಡಲದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.

andolanait

Recent Posts

ಸವಾರರಿಗೆ ತಟ್ಟಿದ ಯುದ್ಧದ ಬಿಸಿ: ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

2 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

11 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

18 mins ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

53 mins ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

1 hour ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

1 hour ago