ಜಿಲ್ಲೆಗಳು

ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಮೋಹನ್ ಕುಮಾರ್ ಆಯ್ಕೆ

ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್‌ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ ವರದಿಗಾರ ಸಿ.ವೈ.ಅಭಿಲಾಶ್, ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರುಧ್ವನಿ ಪತ್ರಿಕೆ ಸಂಪಾದಕ ಕೆ.ಎನ್.ತುಳಸಿಕುಮಾರ್, ಕಾರ್ಯದರ್ಶಿಯಾಗಿ ಇಂಡಿಯನ್ ಟಿವಿ ವರದಿಗಾರ ಸಿ.ಮಂಜುನಾಥ, ಖಜಾಂಚಿಯಾಗಿ ಮೈಸೂರುಮಿತ್ರ ವರದಿಗಾರ ಎಂ.ಪಿ.ಮಂಜುನಾಥ, ಸಹ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಎಸ್.ಲೋಕೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಎಸಿಎನ್ ನ್ಯೂಸ್ ಚಾನಲ್‌ನ ಸಂಪಾದಕ ಕೆ.ಆರ್.ಶ್ಯಾಮಸುಂದರ್, ವೈಬ್ರೆಂಟ್ ಮೈಸೂರು ಪತ್ರಿಕೆಯ ವರದಿಗಾರ ಎಸ್.ಲಿಖಿತ್, ಸಂಚಾಲಕರುಗಳಾಗಿ ಎಸಿಎನ್ ನ್ಯೂಸ್ ಚಾನೆಲ್‌ನ ವರದಿಗಾರ ಎಂ.ಎಸ್.ನರಸಿಂಹ, ಆರ್.ಜೆ.ನ್ಯೂಸ್‌ನ ಸಂಪಾದಕ ಎಸ್.ಬಿ.ಬಸವರಾಜು ಅವರುಗಳು ಆಯ್ಕೆಯಾದರು.
ಪ್ರೆಸ್‌ಕ್ಲಬ್‌ನ ನೂತನ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಕ್ಲಬ್‌ನ ಎಲ್ಲಾ ಸದಸ್ಯರುಗಳ ಸಹಕಾರ, ಮಾರ್ಗದರ್ಶನ ಮತ್ತು ವಿಶ್ವಾಸದೊಂದಿಗೆ ಹಾಗೂ ರಾಜ್ಯ ಸಮಿತಿಯ ಸಲಹೆ ಸೂಚನೆಗಳಂತೆ ಕಾರ್ಯ ನಿರ್ವಹಿಸಲಾಗುವುದು. ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು. ಇದಕ್ಕೆ ತಾಲ್ಲೂಕಿನ ಸರ್ವರ ಸಹಕಾರ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕ್ಲಬ್‌ನ ಎಲ್ಲಾ ಸದಸ್ಯರು ನೂತನ ಅಧ್ಯಕ್ಷರನ್ನು ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

7 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

7 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

9 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

9 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

11 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

11 hours ago