ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರೆಸ್ಕ್ಲಬ್ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ ವರದಿಗಾರ ಸಿ.ವೈ.ಅಭಿಲಾಶ್, ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರುಧ್ವನಿ ಪತ್ರಿಕೆ ಸಂಪಾದಕ ಕೆ.ಎನ್.ತುಳಸಿಕುಮಾರ್, ಕಾರ್ಯದರ್ಶಿಯಾಗಿ ಇಂಡಿಯನ್ ಟಿವಿ ವರದಿಗಾರ ಸಿ.ಮಂಜುನಾಥ, ಖಜಾಂಚಿಯಾಗಿ ಮೈಸೂರುಮಿತ್ರ ವರದಿಗಾರ ಎಂ.ಪಿ.ಮಂಜುನಾಥ, ಸಹ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಎಸ್.ಲೋಕೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಎಸಿಎನ್ ನ್ಯೂಸ್ ಚಾನಲ್ನ ಸಂಪಾದಕ ಕೆ.ಆರ್.ಶ್ಯಾಮಸುಂದರ್, ವೈಬ್ರೆಂಟ್ ಮೈಸೂರು ಪತ್ರಿಕೆಯ ವರದಿಗಾರ ಎಸ್.ಲಿಖಿತ್, ಸಂಚಾಲಕರುಗಳಾಗಿ ಎಸಿಎನ್ ನ್ಯೂಸ್ ಚಾನೆಲ್ನ ವರದಿಗಾರ ಎಂ.ಎಸ್.ನರಸಿಂಹ, ಆರ್.ಜೆ.ನ್ಯೂಸ್ನ ಸಂಪಾದಕ ಎಸ್.ಬಿ.ಬಸವರಾಜು ಅವರುಗಳು ಆಯ್ಕೆಯಾದರು.
ಪ್ರೆಸ್ಕ್ಲಬ್ನ ನೂತನ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಕ್ಲಬ್ನ ಎಲ್ಲಾ ಸದಸ್ಯರುಗಳ ಸಹಕಾರ, ಮಾರ್ಗದರ್ಶನ ಮತ್ತು ವಿಶ್ವಾಸದೊಂದಿಗೆ ಹಾಗೂ ರಾಜ್ಯ ಸಮಿತಿಯ ಸಲಹೆ ಸೂಚನೆಗಳಂತೆ ಕಾರ್ಯ ನಿರ್ವಹಿಸಲಾಗುವುದು. ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು. ಇದಕ್ಕೆ ತಾಲ್ಲೂಕಿನ ಸರ್ವರ ಸಹಕಾರ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಕ್ಲಬ್ನ ಎಲ್ಲಾ ಸದಸ್ಯರು ನೂತನ ಅಧ್ಯಕ್ಷರನ್ನು ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ…
ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್ ಶಾಸಕ ಮಂಥರ್ ಗೌಡ ಖಂಡಿಸಿದ್ದಾರೆ. ಈ…
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…