ಜಿಲ್ಲೆಗಳು

ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಮೋಹನ್ ಕುಮಾರ್ ಆಯ್ಕೆ

ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್‌ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ ವರದಿಗಾರ ಸಿ.ವೈ.ಅಭಿಲಾಶ್, ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರುಧ್ವನಿ ಪತ್ರಿಕೆ ಸಂಪಾದಕ ಕೆ.ಎನ್.ತುಳಸಿಕುಮಾರ್, ಕಾರ್ಯದರ್ಶಿಯಾಗಿ ಇಂಡಿಯನ್ ಟಿವಿ ವರದಿಗಾರ ಸಿ.ಮಂಜುನಾಥ, ಖಜಾಂಚಿಯಾಗಿ ಮೈಸೂರುಮಿತ್ರ ವರದಿಗಾರ ಎಂ.ಪಿ.ಮಂಜುನಾಥ, ಸಹ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಎಸ್.ಲೋಕೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಎಸಿಎನ್ ನ್ಯೂಸ್ ಚಾನಲ್‌ನ ಸಂಪಾದಕ ಕೆ.ಆರ್.ಶ್ಯಾಮಸುಂದರ್, ವೈಬ್ರೆಂಟ್ ಮೈಸೂರು ಪತ್ರಿಕೆಯ ವರದಿಗಾರ ಎಸ್.ಲಿಖಿತ್, ಸಂಚಾಲಕರುಗಳಾಗಿ ಎಸಿಎನ್ ನ್ಯೂಸ್ ಚಾನೆಲ್‌ನ ವರದಿಗಾರ ಎಂ.ಎಸ್.ನರಸಿಂಹ, ಆರ್.ಜೆ.ನ್ಯೂಸ್‌ನ ಸಂಪಾದಕ ಎಸ್.ಬಿ.ಬಸವರಾಜು ಅವರುಗಳು ಆಯ್ಕೆಯಾದರು.
ಪ್ರೆಸ್‌ಕ್ಲಬ್‌ನ ನೂತನ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಕ್ಲಬ್‌ನ ಎಲ್ಲಾ ಸದಸ್ಯರುಗಳ ಸಹಕಾರ, ಮಾರ್ಗದರ್ಶನ ಮತ್ತು ವಿಶ್ವಾಸದೊಂದಿಗೆ ಹಾಗೂ ರಾಜ್ಯ ಸಮಿತಿಯ ಸಲಹೆ ಸೂಚನೆಗಳಂತೆ ಕಾರ್ಯ ನಿರ್ವಹಿಸಲಾಗುವುದು. ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು. ಇದಕ್ಕೆ ತಾಲ್ಲೂಕಿನ ಸರ್ವರ ಸಹಕಾರ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕ್ಲಬ್‌ನ ಎಲ್ಲಾ ಸದಸ್ಯರು ನೂತನ ಅಧ್ಯಕ್ಷರನ್ನು ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago