ಜಿಲ್ಲೆಗಳು

ಕರ್ನಾಟಕ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಮೋಹನ್ ಕುಮಾರ್ ಆಯ್ಕೆ

ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್‌ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ ವರದಿಗಾರ ಸಿ.ವೈ.ಅಭಿಲಾಶ್, ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರುಧ್ವನಿ ಪತ್ರಿಕೆ ಸಂಪಾದಕ ಕೆ.ಎನ್.ತುಳಸಿಕುಮಾರ್, ಕಾರ್ಯದರ್ಶಿಯಾಗಿ ಇಂಡಿಯನ್ ಟಿವಿ ವರದಿಗಾರ ಸಿ.ಮಂಜುನಾಥ, ಖಜಾಂಚಿಯಾಗಿ ಮೈಸೂರುಮಿತ್ರ ವರದಿಗಾರ ಎಂ.ಪಿ.ಮಂಜುನಾಥ, ಸಹ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಎಸ್.ಲೋಕೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಎಸಿಎನ್ ನ್ಯೂಸ್ ಚಾನಲ್‌ನ ಸಂಪಾದಕ ಕೆ.ಆರ್.ಶ್ಯಾಮಸುಂದರ್, ವೈಬ್ರೆಂಟ್ ಮೈಸೂರು ಪತ್ರಿಕೆಯ ವರದಿಗಾರ ಎಸ್.ಲಿಖಿತ್, ಸಂಚಾಲಕರುಗಳಾಗಿ ಎಸಿಎನ್ ನ್ಯೂಸ್ ಚಾನೆಲ್‌ನ ವರದಿಗಾರ ಎಂ.ಎಸ್.ನರಸಿಂಹ, ಆರ್.ಜೆ.ನ್ಯೂಸ್‌ನ ಸಂಪಾದಕ ಎಸ್.ಬಿ.ಬಸವರಾಜು ಅವರುಗಳು ಆಯ್ಕೆಯಾದರು.
ಪ್ರೆಸ್‌ಕ್ಲಬ್‌ನ ನೂತನ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಕ್ಲಬ್‌ನ ಎಲ್ಲಾ ಸದಸ್ಯರುಗಳ ಸಹಕಾರ, ಮಾರ್ಗದರ್ಶನ ಮತ್ತು ವಿಶ್ವಾಸದೊಂದಿಗೆ ಹಾಗೂ ರಾಜ್ಯ ಸಮಿತಿಯ ಸಲಹೆ ಸೂಚನೆಗಳಂತೆ ಕಾರ್ಯ ನಿರ್ವಹಿಸಲಾಗುವುದು. ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು. ಇದಕ್ಕೆ ತಾಲ್ಲೂಕಿನ ಸರ್ವರ ಸಹಕಾರ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕ್ಲಬ್‌ನ ಎಲ್ಲಾ ಸದಸ್ಯರು ನೂತನ ಅಧ್ಯಕ್ಷರನ್ನು ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago