ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ “ಹುಸೇನಿ ಯೂತ್ ಕ್ಲಬ್” ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು ಕರ್ಬಾಲದಲ್ಲಿ ಮಾಡಿದ ತ್ಯಾಗ ಬಲಿದಾನದ ಮಹತ್ವವನ್ನು ಸಾರಿದರು. ಮದ್ಯ ಪ್ರಾಚ್ಯದ ಕಾರ್ಬಾಲದಲ್ಲಿ ಹುಸೇನ್ ಇಬ್ನ್ ಅಲಿ ಹಾಗೂ ಅವರ ಸಂಗಡಿಗರಿಗೆ ವಾರನುಗಟ್ಟಲೆ ವಿರೋಧಿಗಳು ಸುತ್ತುವರೆದು ಕುಡಿಯುವ ನೀರನ್ನು ನಿರಾಕರಿಸಿದ್ದನ್ನು ಸ್ಮರಿಸಬಹುದಾಗಿದೆ.
ಮೊಹರಂ ಹಬ್ಬದ ಬಗ್ಗೆ ಹೇಳುವುದಾರೆ ಕರ್ನಾಟಕ ರಾಜ್ಯದ ರಾಯಚೂರ ಜಿಲ್ಲೆಯ ಮುದಗಲ್ಲ ಗ್ರಾಮದಲ್ಲಿ ಮೊಹರಂ ಆಚರಣೆಯಲ್ಲಿ ಮುಸ್ಲಿಮೇತರರೇ ಹೆಚ್ಚಾಗಿ ಭಾಗವಹಿಸುತ್ತಾರೆ. ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಅಳ್ಳಳ್ಳಿ ಬಪ್ಪಾ ವೇಷ ಹಾಕಿ ಕುಣಿದು ಕುಪ್ಪಳಿಸುತ್ತಾರೆ. ಕಂದೂರಿ ಮಾಡಿ ಎಡೆ ನೀಡಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುತ್ತಾರೆ. ದೀರ್ಘ ದಂಡ ನಮಸ್ಕಾರ ಹಾಕಿ ಧನ್ಯರಾಗುತ್ತಾರೆ. ಹತ್ತನೆಯ ದಿನ ಹೊರಡುವ ಕಾಸೀಮ ಅಲಂ ಮತ್ತು ಹಸನ ಅಲಂ ಒಂದಕ್ಕೊಂದು ಭೇಟಿಯಾದಾಗ ನೆರೆದ ಜನ ಸಾಮೂಹ ತೇರಿನ ಮೇಲೆ ಹಣ್ಣುಕಾಯಿ ಎಸೆಯುವಂತೆ ಸೂರ ಮಾಡಿ ಭಯ ಭಕ್ತಿಯಿಂದ ಕೈಮುಗಿದು ತೃಪ್ತರಾಗುತ್ತಾರೆ. ಹಿಂದುಗಳ ಜಾತ್ರೆಯ ಸಂಭ್ರಮವನ್ನು ನೆನಪಿಸುವ ಮುದಗಲ್ಲ ಮೊಹರಂ ಪ್ರಚಲಿತವಾಗಿದೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…