ಜಿಲ್ಲೆಗಳು

ಮೊಹರಂ ಹಬ್ಬದ ಪ್ರಯುಕ್ತ ಜೀವ ಜಲ ವಿತರಣೆ

ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ “ಹುಸೇನಿ ಯೂತ್ ಕ್ಲಬ್” ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು ಕರ್ಬಾಲದಲ್ಲಿ ಮಾಡಿದ ತ್ಯಾಗ ಬಲಿದಾನದ ಮಹತ್ವವನ್ನು ಸಾರಿದರು. ಮದ್ಯ ಪ್ರಾಚ್ಯದ  ಕಾರ್ಬಾಲದಲ್ಲಿ  ಹುಸೇನ್ ಇಬ್ನ್ ಅಲಿ ಹಾಗೂ ಅವರ ಸಂಗಡಿಗರಿಗೆ ವಾರನುಗಟ್ಟಲೆ ವಿರೋಧಿಗಳು ಸುತ್ತುವರೆದು ಕುಡಿಯುವ ನೀರನ್ನು ನಿರಾಕರಿಸಿದ್ದನ್ನು ಸ್ಮರಿಸಬಹುದಾಗಿದೆ.

ಮೊಹರಂ ಹಬ್ಬದ ಬಗ್ಗೆ ಹೇಳುವುದಾರೆ ಕರ್ನಾಟಕ ರಾಜ್ಯದ ರಾಯಚೂರ ಜಿಲ್ಲೆಯ ಮುದಗಲ್ಲ ಗ್ರಾಮದಲ್ಲಿ ಮೊಹರಂ ಆಚರಣೆಯಲ್ಲಿ ಮುಸ್ಲಿಮೇತರರೇ ಹೆಚ್ಚಾಗಿ ಭಾಗವಹಿಸುತ್ತಾರೆ. ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಅಳ್ಳಳ್ಳಿ ಬಪ್ಪಾ ವೇಷ ಹಾಕಿ ಕುಣಿದು ಕುಪ್ಪಳಿಸುತ್ತಾರೆ. ಕಂದೂರಿ ಮಾಡಿ ಎಡೆ ನೀಡಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುತ್ತಾರೆ. ದೀರ್ಘ ದಂಡ ನಮಸ್ಕಾರ ಹಾಕಿ ಧನ್ಯರಾಗುತ್ತಾರೆ. ಹತ್ತನೆಯ ದಿನ ಹೊರಡುವ ಕಾಸೀಮ ಅಲಂ ಮತ್ತು ಹಸನ ಅಲಂ ಒಂದಕ್ಕೊಂದು ಭೇಟಿಯಾದಾಗ ನೆರೆದ ಜನ ಸಾಮೂಹ ತೇರಿನ ಮೇಲೆ ಹಣ್ಣುಕಾಯಿ ಎಸೆಯುವಂತೆ ಸೂರ ಮಾಡಿ ಭಯ ಭಕ್ತಿಯಿಂದ ಕೈಮುಗಿದು ತೃಪ್ತರಾಗುತ್ತಾರೆ. ಹಿಂದುಗಳ ಜಾತ್ರೆಯ ಸಂಭ್ರಮವನ್ನು ನೆನಪಿಸುವ ಮುದಗಲ್ಲ ಮೊಹರಂ ಪ್ರಚಲಿತವಾಗಿದೆ.

 

andolanait

Recent Posts

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

5 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

9 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

18 mins ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

24 mins ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

33 mins ago

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…

60 mins ago