ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ “ಹುಸೇನಿ ಯೂತ್ ಕ್ಲಬ್” ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು ಕರ್ಬಾಲದಲ್ಲಿ ಮಾಡಿದ ತ್ಯಾಗ ಬಲಿದಾನದ ಮಹತ್ವವನ್ನು ಸಾರಿದರು. ಮದ್ಯ ಪ್ರಾಚ್ಯದ ಕಾರ್ಬಾಲದಲ್ಲಿ ಹುಸೇನ್ ಇಬ್ನ್ ಅಲಿ ಹಾಗೂ ಅವರ ಸಂಗಡಿಗರಿಗೆ ವಾರನುಗಟ್ಟಲೆ ವಿರೋಧಿಗಳು ಸುತ್ತುವರೆದು ಕುಡಿಯುವ ನೀರನ್ನು ನಿರಾಕರಿಸಿದ್ದನ್ನು ಸ್ಮರಿಸಬಹುದಾಗಿದೆ.
ಮೊಹರಂ ಹಬ್ಬದ ಬಗ್ಗೆ ಹೇಳುವುದಾರೆ ಕರ್ನಾಟಕ ರಾಜ್ಯದ ರಾಯಚೂರ ಜಿಲ್ಲೆಯ ಮುದಗಲ್ಲ ಗ್ರಾಮದಲ್ಲಿ ಮೊಹರಂ ಆಚರಣೆಯಲ್ಲಿ ಮುಸ್ಲಿಮೇತರರೇ ಹೆಚ್ಚಾಗಿ ಭಾಗವಹಿಸುತ್ತಾರೆ. ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಅಳ್ಳಳ್ಳಿ ಬಪ್ಪಾ ವೇಷ ಹಾಕಿ ಕುಣಿದು ಕುಪ್ಪಳಿಸುತ್ತಾರೆ. ಕಂದೂರಿ ಮಾಡಿ ಎಡೆ ನೀಡಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುತ್ತಾರೆ. ದೀರ್ಘ ದಂಡ ನಮಸ್ಕಾರ ಹಾಕಿ ಧನ್ಯರಾಗುತ್ತಾರೆ. ಹತ್ತನೆಯ ದಿನ ಹೊರಡುವ ಕಾಸೀಮ ಅಲಂ ಮತ್ತು ಹಸನ ಅಲಂ ಒಂದಕ್ಕೊಂದು ಭೇಟಿಯಾದಾಗ ನೆರೆದ ಜನ ಸಾಮೂಹ ತೇರಿನ ಮೇಲೆ ಹಣ್ಣುಕಾಯಿ ಎಸೆಯುವಂತೆ ಸೂರ ಮಾಡಿ ಭಯ ಭಕ್ತಿಯಿಂದ ಕೈಮುಗಿದು ತೃಪ್ತರಾಗುತ್ತಾರೆ. ಹಿಂದುಗಳ ಜಾತ್ರೆಯ ಸಂಭ್ರಮವನ್ನು ನೆನಪಿಸುವ ಮುದಗಲ್ಲ ಮೊಹರಂ ಪ್ರಚಲಿತವಾಗಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…