ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗೋಶಾಲೆ ತೆರೆಯದೆ ೪ ಕೋಟಿ ರೂ. ದುರುಪಯೋಗ ಮಾಡಿಕೊಂಡ ಅಂದಿನ ತಹಶೀಲ್ದಾರ್ ಕಾಮಾಕ್ಷಮ್ಮ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಳಂಬ ಮಾಡಲಾಗುತ್ತಿದೆ ಎಂದು ಆರ್ಟಿಐ ಕಾರ್ಯಕರ್ತ ಆರ್.ಗೋವಿಂದರಾಜ್ ಆರೋಪಿಸಿದ್ದಾರೆ.
೨೦೧೬ ರಿಂದ ೨೦೧೭-೧೮ನೇ ಸಾಲಿನಲ್ಲಿ ಜಿಲ್ಲೆಯಲ್ಲೂ ಮಳೆಯಾಗದೆ ಬರ ಪರಿಸ್ಥಿತಿಯಿತ್ತು. ಆಗ ಕೊಳ್ಳೇಗಾಲ ತಾಲ್ಲೂಕಿನಲ್ಲಿ ಜಾನುವಾರುಗಳಿಗೆ ಗೋಶಾಲೆ ತೆರೆಯಲು, ಮೇವು ನಿಧಿ ಸ್ಥಾಪಿಸಲು ಮತ್ತು ಕುಡಿಯುವ ನೀರು ಪೂರೈಕೆ ರಾಜ್ಯ ಸರ್ಕಾರ ೪ ಕೋಟಿ ರೂ. ನೀಡಿತ್ತು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಮಾಕ್ಷಮ್ಮ ಅವರು ಒಂದು ಗೋಶಾಲೆ ತೆರೆಯಲಿಲ್ಲ. ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು. ಈ ಬಗ್ಗೆ ೨೦೨೧ರ ನವೆಂಬರ್ ೩೦ ರಂದು ಸೂಕ್ತ ದಾಖಲೆಗಳ ಜೊತೆ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಲಾಗಿತ್ತು ಎಂದರು.
ಈ ಕುರಿತು ತನಿಖೆ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿಗಳು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ಸಲ್ಲಿಸಿದ್ದರು. ಇಲ್ಲಿಯ ತನಕ ಯಾವುದೇ ಕ್ರಮ ವಹಿಸಿಲ್ಲ. ಈಗ ಕಾಮಾಕ್ಷಮ್ಮ ನಿವೃತ್ತರಾಗಿದ್ದಾರೆ. ಇನ್ನಾದರೂ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ದಸಂಸ ಮುಖಂಡರಾದ ಚಂದ್ರಶೇಖರ್, ಮಹೇಶ್, ಶ್ರೇಯಸ್ ಹಾಜರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…