ಜಿಲ್ಲೆಗಳು

ಮಂಗ, ಹಂದಿ, ಬೀದಿ ನಾಯಿಗಳ ಕಾಟ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ

ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್‌ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ ಗುಂಪು ಮನೆಯ ಮೇಲ್ಚಾವಣಿ ಹಾಳು ಮಾಡುವುದಲ್ಲದೆ, ಕೇಬಲ್ ವೈರ್, ಮನೆಯ ಮೇಲಿಟ್ಟಿರುವ ವಸ್ತುಗಳನ್ನು ಹಾಳು ಮಾಡುತ್ತಿವೆ. ಕೆಲವು ಕೋತಿಗಳು ಮನೆಯೊಳಗೆ ನುಗ್ಗಿ ಧಾಂದಲೆ ನಡೆಸುತಿದ್ದು ನಿವಾಸಿಗಳು ವಾಸ ಮಾಡುವುದೇ ಕಷ್ಟವಾಗಿದೆ. ಜನರ ಮೇಲೆ ಮಂಗಗಳು ಎರಗುತ್ತಿದ್ದು ನಿತ್ಯ ಮಂಗಗಳನ್ನು ಓಡಿಸಲು ಪಟಾಕಿ ಸಿಡಿಸುವ ಪ್ರಮೇಯ ಎದುರಾಗಿದೆ.

ಅಲ್ಲದೇ ಕಾಲೋನಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳು ಓಡಾಡಲು ಕಷ್ಟವಾಗುತ್ತಿದೆ. ಬೀದಿಯಲ್ಲಿ ಮಕ್ಕಳು ಆಟವಾಡುವಾಗ ಅಥವಾ ಶಾಲೆಗೆ ತೆರಳುವ ಸಂದರ್ಭದಲ್ಲಿ ದಾಳಿ ಮಾಡಬಹುದು ಎಂಬ ಭಯ ಪೋಷಕರನ್ನು ದಿನನಿತ್ಯ ಕಾಡುತ್ತಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಮಂಗಗಳು, ನಾಯಿಗಳನ್ನು ಹಿಡಿದು ಹೊರಬಿಡುವ ಕೆಲಸ ಮಾಡಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಬಿಡಾಡಿ ದನಗಳ ಹಾವಳಿ: ಬಿಡಾಡಿ ದನಗಳು ಸಿಕ್ಕ ಸಿಕ್ಕವರ ಮನೆಯ ಎದುರಿನ ಗೇಟ್ ಮುರಿದು ಒಳ ನುಗ್ಗುತ್ತಿವೆ. ವಾಹನಗಳಿಗೆ ಅಡ್ಡಾದಿಡ್ಡಿ ನಿಲ್ಲುವುದರಿಂದ ಸವಾರರು ಸಂಚರಿಸಲು ತೊಂದರೆಯಾಗುತ್ತಿದೆ. ಮತ್ತೊಂದೆಡೆ ಸಾಕು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿ ಸಾಕುವವರು, ಬಿಡಾಡಿ ದನಗಳನ್ನು ಬೀದಿಗೆ ಬಿಡುವವರ ವಿರುದ್ಧ ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸಬೇಕು:
ಪಟ್ಟಣದ ಜನತಾ ಕಾಲೋನಿಯಲ್ಲಿ ಬೀದಿ ನಾಯಿಗಳು, ಮಂಗಗಳು, ಬಿಡಾಡಿ ದನಗಳು, ಹಂದಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಲಕ್ಷಣಗಳನ್ನು ಯಾರೂ ತಳ್ಳಿ ಹಾಕುವಂತಿಲ್ಲ. ಹಾಗಾಗಿ ಈ ಬಗ್ಗೆಯೂ ಪುರಸಭೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಪ್ರತಿನಿತ್ಯ ಮಂಗಗಳು, ಬೀದಿ ನಾಯಿಗಳು, ಬಿಡಾಡಿ ದನಗಳು, ಹಂದಿಗಳ ಉಪಟಳ ಹೆಚ್ಚಾಗಿದ್ದು ವಾಸ ಮಾಡುವುದೇ ಕಷ್ಟವಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
ರತ್ನಮ್ಮ, ಕಾಲೋನಿಯ ನಿವಾಸಿ.


ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಮಂಗಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು , ಇವುಗಳನ್ನು ಓಡಿಸಲು ಜನರು ನಿತ್ಯ ಪಟಾಕಿ ಸಿಡಿಸಬೇಕಿದೆ. ಸದಾ ಮನೆಯ ಬಾಗಿಲು ಹಾಕಿಕೊಂಡೇ ಇರಬೇಕು. ಆದ್ದರಿಂದ ಬೀದಿನಾಯಿಗಳ ನಿಯoತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

ನಾ.ಕುಮಾರ್. ಪುರಸಭೆ ಸದಸ್ಯ

andolanait

Recent Posts

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

48 mins ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

2 hours ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

2 hours ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

2 hours ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

2 hours ago