ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ
ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ ಗುಂಪು ಮನೆಯ ಮೇಲ್ಚಾವಣಿ ಹಾಳು ಮಾಡುವುದಲ್ಲದೆ, ಕೇಬಲ್ ವೈರ್, ಮನೆಯ ಮೇಲಿಟ್ಟಿರುವ ವಸ್ತುಗಳನ್ನು ಹಾಳು ಮಾಡುತ್ತಿವೆ. ಕೆಲವು ಕೋತಿಗಳು ಮನೆಯೊಳಗೆ ನುಗ್ಗಿ ಧಾಂದಲೆ ನಡೆಸುತಿದ್ದು ನಿವಾಸಿಗಳು ವಾಸ ಮಾಡುವುದೇ ಕಷ್ಟವಾಗಿದೆ. ಜನರ ಮೇಲೆ ಮಂಗಗಳು ಎರಗುತ್ತಿದ್ದು ನಿತ್ಯ ಮಂಗಗಳನ್ನು ಓಡಿಸಲು ಪಟಾಕಿ ಸಿಡಿಸುವ ಪ್ರಮೇಯ ಎದುರಾಗಿದೆ.
ಅಲ್ಲದೇ ಕಾಲೋನಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳು ಓಡಾಡಲು ಕಷ್ಟವಾಗುತ್ತಿದೆ. ಬೀದಿಯಲ್ಲಿ ಮಕ್ಕಳು ಆಟವಾಡುವಾಗ ಅಥವಾ ಶಾಲೆಗೆ ತೆರಳುವ ಸಂದರ್ಭದಲ್ಲಿ ದಾಳಿ ಮಾಡಬಹುದು ಎಂಬ ಭಯ ಪೋಷಕರನ್ನು ದಿನನಿತ್ಯ ಕಾಡುತ್ತಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಮಂಗಗಳು, ನಾಯಿಗಳನ್ನು ಹಿಡಿದು ಹೊರಬಿಡುವ ಕೆಲಸ ಮಾಡಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಬಿಡಾಡಿ ದನಗಳ ಹಾವಳಿ: ಬಿಡಾಡಿ ದನಗಳು ಸಿಕ್ಕ ಸಿಕ್ಕವರ ಮನೆಯ ಎದುರಿನ ಗೇಟ್ ಮುರಿದು ಒಳ ನುಗ್ಗುತ್ತಿವೆ. ವಾಹನಗಳಿಗೆ ಅಡ್ಡಾದಿಡ್ಡಿ ನಿಲ್ಲುವುದರಿಂದ ಸವಾರರು ಸಂಚರಿಸಲು ತೊಂದರೆಯಾಗುತ್ತಿದೆ. ಮತ್ತೊಂದೆಡೆ ಸಾಕು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿ ಸಾಕುವವರು, ಬಿಡಾಡಿ ದನಗಳನ್ನು ಬೀದಿಗೆ ಬಿಡುವವರ ವಿರುದ್ಧ ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸಬೇಕು:
ಪಟ್ಟಣದ ಜನತಾ ಕಾಲೋನಿಯಲ್ಲಿ ಬೀದಿ ನಾಯಿಗಳು, ಮಂಗಗಳು, ಬಿಡಾಡಿ ದನಗಳು, ಹಂದಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಲಕ್ಷಣಗಳನ್ನು ಯಾರೂ ತಳ್ಳಿ ಹಾಕುವಂತಿಲ್ಲ. ಹಾಗಾಗಿ ಈ ಬಗ್ಗೆಯೂ ಪುರಸಭೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಪ್ರತಿನಿತ್ಯ ಮಂಗಗಳು, ಬೀದಿ ನಾಯಿಗಳು, ಬಿಡಾಡಿ ದನಗಳು, ಹಂದಿಗಳ ಉಪಟಳ ಹೆಚ್ಚಾಗಿದ್ದು ವಾಸ ಮಾಡುವುದೇ ಕಷ್ಟವಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
–ರತ್ನಮ್ಮ, ಕಾಲೋನಿಯ ನಿವಾಸಿ.
ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಮಂಗಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು , ಇವುಗಳನ್ನು ಓಡಿಸಲು ಜನರು ನಿತ್ಯ ಪಟಾಕಿ ಸಿಡಿಸಬೇಕಿದೆ. ಸದಾ ಮನೆಯ ಬಾಗಿಲು ಹಾಕಿಕೊಂಡೇ ಇರಬೇಕು. ಆದ್ದರಿಂದ ಬೀದಿನಾಯಿಗಳ ನಿಯoತ್ರಣಕ್ಕೆ ಕ್ರಮ ಕೈಗೊಳ್ಳಬೇಕು.
ನಾ.ಕುಮಾರ್. ಪುರಸಭೆ ಸದಸ್ಯ
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…