ಜಿಲ್ಲೆಗಳು

ಮಂಗ, ಹಂದಿ, ಬೀದಿ ನಾಯಿಗಳ ಕಾಟ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ

ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್‌ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ ಗುಂಪು ಮನೆಯ ಮೇಲ್ಚಾವಣಿ ಹಾಳು ಮಾಡುವುದಲ್ಲದೆ, ಕೇಬಲ್ ವೈರ್, ಮನೆಯ ಮೇಲಿಟ್ಟಿರುವ ವಸ್ತುಗಳನ್ನು ಹಾಳು ಮಾಡುತ್ತಿವೆ. ಕೆಲವು ಕೋತಿಗಳು ಮನೆಯೊಳಗೆ ನುಗ್ಗಿ ಧಾಂದಲೆ ನಡೆಸುತಿದ್ದು ನಿವಾಸಿಗಳು ವಾಸ ಮಾಡುವುದೇ ಕಷ್ಟವಾಗಿದೆ. ಜನರ ಮೇಲೆ ಮಂಗಗಳು ಎರಗುತ್ತಿದ್ದು ನಿತ್ಯ ಮಂಗಗಳನ್ನು ಓಡಿಸಲು ಪಟಾಕಿ ಸಿಡಿಸುವ ಪ್ರಮೇಯ ಎದುರಾಗಿದೆ.

ಅಲ್ಲದೇ ಕಾಲೋನಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳು ಓಡಾಡಲು ಕಷ್ಟವಾಗುತ್ತಿದೆ. ಬೀದಿಯಲ್ಲಿ ಮಕ್ಕಳು ಆಟವಾಡುವಾಗ ಅಥವಾ ಶಾಲೆಗೆ ತೆರಳುವ ಸಂದರ್ಭದಲ್ಲಿ ದಾಳಿ ಮಾಡಬಹುದು ಎಂಬ ಭಯ ಪೋಷಕರನ್ನು ದಿನನಿತ್ಯ ಕಾಡುತ್ತಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಮಂಗಗಳು, ನಾಯಿಗಳನ್ನು ಹಿಡಿದು ಹೊರಬಿಡುವ ಕೆಲಸ ಮಾಡಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಬಿಡಾಡಿ ದನಗಳ ಹಾವಳಿ: ಬಿಡಾಡಿ ದನಗಳು ಸಿಕ್ಕ ಸಿಕ್ಕವರ ಮನೆಯ ಎದುರಿನ ಗೇಟ್ ಮುರಿದು ಒಳ ನುಗ್ಗುತ್ತಿವೆ. ವಾಹನಗಳಿಗೆ ಅಡ್ಡಾದಿಡ್ಡಿ ನಿಲ್ಲುವುದರಿಂದ ಸವಾರರು ಸಂಚರಿಸಲು ತೊಂದರೆಯಾಗುತ್ತಿದೆ. ಮತ್ತೊಂದೆಡೆ ಸಾಕು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿ ಸಾಕುವವರು, ಬಿಡಾಡಿ ದನಗಳನ್ನು ಬೀದಿಗೆ ಬಿಡುವವರ ವಿರುದ್ಧ ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸಬೇಕು:
ಪಟ್ಟಣದ ಜನತಾ ಕಾಲೋನಿಯಲ್ಲಿ ಬೀದಿ ನಾಯಿಗಳು, ಮಂಗಗಳು, ಬಿಡಾಡಿ ದನಗಳು, ಹಂದಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಲಕ್ಷಣಗಳನ್ನು ಯಾರೂ ತಳ್ಳಿ ಹಾಕುವಂತಿಲ್ಲ. ಹಾಗಾಗಿ ಈ ಬಗ್ಗೆಯೂ ಪುರಸಭೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಪ್ರತಿನಿತ್ಯ ಮಂಗಗಳು, ಬೀದಿ ನಾಯಿಗಳು, ಬಿಡಾಡಿ ದನಗಳು, ಹಂದಿಗಳ ಉಪಟಳ ಹೆಚ್ಚಾಗಿದ್ದು ವಾಸ ಮಾಡುವುದೇ ಕಷ್ಟವಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
ರತ್ನಮ್ಮ, ಕಾಲೋನಿಯ ನಿವಾಸಿ.


ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಮಂಗಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು , ಇವುಗಳನ್ನು ಓಡಿಸಲು ಜನರು ನಿತ್ಯ ಪಟಾಕಿ ಸಿಡಿಸಬೇಕಿದೆ. ಸದಾ ಮನೆಯ ಬಾಗಿಲು ಹಾಕಿಕೊಂಡೇ ಇರಬೇಕು. ಆದ್ದರಿಂದ ಬೀದಿನಾಯಿಗಳ ನಿಯoತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

ನಾ.ಕುಮಾರ್. ಪುರಸಭೆ ಸದಸ್ಯ

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago