ಜಿಲ್ಲೆಗಳು

ಮಂಗ, ಹಂದಿ, ಬೀದಿ ನಾಯಿಗಳ ಕಾಟ

ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ

ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್‌ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ ಗುಂಪು ಮನೆಯ ಮೇಲ್ಚಾವಣಿ ಹಾಳು ಮಾಡುವುದಲ್ಲದೆ, ಕೇಬಲ್ ವೈರ್, ಮನೆಯ ಮೇಲಿಟ್ಟಿರುವ ವಸ್ತುಗಳನ್ನು ಹಾಳು ಮಾಡುತ್ತಿವೆ. ಕೆಲವು ಕೋತಿಗಳು ಮನೆಯೊಳಗೆ ನುಗ್ಗಿ ಧಾಂದಲೆ ನಡೆಸುತಿದ್ದು ನಿವಾಸಿಗಳು ವಾಸ ಮಾಡುವುದೇ ಕಷ್ಟವಾಗಿದೆ. ಜನರ ಮೇಲೆ ಮಂಗಗಳು ಎರಗುತ್ತಿದ್ದು ನಿತ್ಯ ಮಂಗಗಳನ್ನು ಓಡಿಸಲು ಪಟಾಕಿ ಸಿಡಿಸುವ ಪ್ರಮೇಯ ಎದುರಾಗಿದೆ.

ಅಲ್ಲದೇ ಕಾಲೋನಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳು ಓಡಾಡಲು ಕಷ್ಟವಾಗುತ್ತಿದೆ. ಬೀದಿಯಲ್ಲಿ ಮಕ್ಕಳು ಆಟವಾಡುವಾಗ ಅಥವಾ ಶಾಲೆಗೆ ತೆರಳುವ ಸಂದರ್ಭದಲ್ಲಿ ದಾಳಿ ಮಾಡಬಹುದು ಎಂಬ ಭಯ ಪೋಷಕರನ್ನು ದಿನನಿತ್ಯ ಕಾಡುತ್ತಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಮಂಗಗಳು, ನಾಯಿಗಳನ್ನು ಹಿಡಿದು ಹೊರಬಿಡುವ ಕೆಲಸ ಮಾಡಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಬಿಡಾಡಿ ದನಗಳ ಹಾವಳಿ: ಬಿಡಾಡಿ ದನಗಳು ಸಿಕ್ಕ ಸಿಕ್ಕವರ ಮನೆಯ ಎದುರಿನ ಗೇಟ್ ಮುರಿದು ಒಳ ನುಗ್ಗುತ್ತಿವೆ. ವಾಹನಗಳಿಗೆ ಅಡ್ಡಾದಿಡ್ಡಿ ನಿಲ್ಲುವುದರಿಂದ ಸವಾರರು ಸಂಚರಿಸಲು ತೊಂದರೆಯಾಗುತ್ತಿದೆ. ಮತ್ತೊಂದೆಡೆ ಸಾಕು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿ ಸಾಕುವವರು, ಬಿಡಾಡಿ ದನಗಳನ್ನು ಬೀದಿಗೆ ಬಿಡುವವರ ವಿರುದ್ಧ ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸಬೇಕು:
ಪಟ್ಟಣದ ಜನತಾ ಕಾಲೋನಿಯಲ್ಲಿ ಬೀದಿ ನಾಯಿಗಳು, ಮಂಗಗಳು, ಬಿಡಾಡಿ ದನಗಳು, ಹಂದಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಲಕ್ಷಣಗಳನ್ನು ಯಾರೂ ತಳ್ಳಿ ಹಾಕುವಂತಿಲ್ಲ. ಹಾಗಾಗಿ ಈ ಬಗ್ಗೆಯೂ ಪುರಸಭೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಪ್ರತಿನಿತ್ಯ ಮಂಗಗಳು, ಬೀದಿ ನಾಯಿಗಳು, ಬಿಡಾಡಿ ದನಗಳು, ಹಂದಿಗಳ ಉಪಟಳ ಹೆಚ್ಚಾಗಿದ್ದು ವಾಸ ಮಾಡುವುದೇ ಕಷ್ಟವಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.
ರತ್ನಮ್ಮ, ಕಾಲೋನಿಯ ನಿವಾಸಿ.


ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ಮಂಗಗಳು, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು , ಇವುಗಳನ್ನು ಓಡಿಸಲು ಜನರು ನಿತ್ಯ ಪಟಾಕಿ ಸಿಡಿಸಬೇಕಿದೆ. ಸದಾ ಮನೆಯ ಬಾಗಿಲು ಹಾಕಿಕೊಂಡೇ ಇರಬೇಕು. ಆದ್ದರಿಂದ ಬೀದಿನಾಯಿಗಳ ನಿಯoತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

ನಾ.ಕುಮಾರ್. ಪುರಸಭೆ ಸದಸ್ಯ

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

9 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

11 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

14 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

17 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

18 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

18 hours ago