90ರಿಂದ 425 ಕಿಲೋ ತನಕ ದೇಹ ತೂಕ ಹೆಚ್ಚಿಸಿಕೊಂಡ ದಸರೆ ಆನೆಗಳು
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ 14 ಆನೆಗಳ ತೂಕ ದಾಖಲಿಸುವ ಪ್ರಕ್ರಿಯೆ ಶುಕ್ರವಾರ ನಡೆಯಿತು.
ದಸರಾ ಗಜಪಡೆಗೆ ಸೇರಿದ ಆನೆಗಳ ತೂಕ ನೋಡುವ ಪ್ರಕ್ರಿಯೆಯು ಪ್ರತೀವರ್ಷ ಮೈಸೂರಿನ ಧನ್ವಂತ್ರಿ ರಸ್ತೆಯ ವೇ ಬ್ರಿಡ್ಜ್ ನಲ್ಲಿ ನಡೆಯುತ್ತದೆ. ಈ ಬಾರಿಯೂ ತೂಕದಲ್ಲಿ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5950 ಕೆ.ಜಿ ತೂಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಅರಮನೆ ಪ್ರವೇಶಿಸಿದಾಗಲೂ ಎಲ್ಲ ಆನೆಗಳ ತೂಕ ದಾಖಲಿಸಲಾಗಿತ್ತು. ಆಗಷ್ಟ್ 10ರಂದು ಅರ್ಜುನನ ತೂಕ 5775 ಇತ್ತು. ಒಂದು ತಿಂಗಳಲ್ಲಿ 175 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾನೆ.
ಅರಮನೆಗೆ ಕಾಲಿಟ್ಟ ಕ್ಷಣದಿಂದಲೇ ಎಲ್ಲ ಆನೆಗಳಿಗೆ ವಿಶೇಷ ಆಹಾರ ನೀಡಿ ಆರೈಕೆ ಮಾಡಲಾಗುತ್ತದೆ. ಜಂಬೂ ಸವಾರಿ ವೇಳೆಗೆ ಈ ಎಲ್ಲ ಆನೆಗಳು ತೂಕ ಹೆಚ್ಚಿಸಿಕೊಂಡು ಸದೃಢವಾಗುತ್ತವೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಈಗ ಬರೋಬ್ಬರಿ 5000 ಕಿಲೋ ತೂಗುತ್ತಿದ್ದಾನೆ. ಕಳೆದ ತಿಂಗಳು ಈತನ ತೂಕ 4,770 ಇತ್ತು. ಒಂದು ತಿಂಗಳಲ್ಲಿ 230 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾನೆ.
ಗಂಡಾನೆಗಳಿಗೆ ಹೋಲಿಸಿದರೆ ಸ್ಲಿಮ್ ಆಗಿದ್ದ ಹೆಣ್ಣಾನೆಗಳೂ ಈಗ ತೂಕ ಹೆಚ್ಚಿಸಿಕೊಂಡು ದಸರೆಯ ಕಾರ್ಯಭಾರ ವಹಿಸಲು ಸಿದ್ದವಾಗಿವೆ. 3,050 ಕಿಲೋ ತೂಕದ ಚೈತ್ರ ಒಂದು ತಿಂಗಳಲ್ಲಿ 3235 ಕಿಲೋ, 3100 ಕಿಲೋ ತೂಕದ ಕಾವೇರಿ 3245 ಕಿಲೋಗೆ ದೇಹ ತೂಕ ಏರಿಸಿಕೊಂಡಿದ್ದಾರೆ. 2920 ಕಿಲೋ ಇದ್ದ ಲಕ್ಷ್ಮೀ ಬರೋಬ್ಬರಿ 230 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾಳೆ. ದಸರೆಯ ಹಳೆಯ ಆನೆಗಳಲ್ಲಿ ಒಂದಾದ ವಿಜಯ 2760 ಕಿಲೋ ತೂಗುವ ಮೂಲಕ ಎಲ್ಲರಿಗಿಂತ ಹೆಚ್ಚು ಸ್ಲಿಮ್ ಆಗಿದ್ದಾಳೆ.
ಡಾ.ವಿ. ಕರಿಕಾಳನ್, ಡಿಸಿಎಫ್
ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ಮತ್ತು ಎರಡನೇ ತಂಡದ ಆನೆಗಳು ಸೇರಿ ಒಟ್ಟು 14 ಆನೆಗಳನ್ನು ತೂಕ ಮಾಡಿದ್ದೇವೆ. ಗಂಡಾನೆಗಳು 4000 ದಿಂದ 4600 ಸಾವಿರ ಕೆಜಿ ಇದ್ದು, ಕಿರಿಯ ವಯಸ್ಸಿನ ಆನೆ ಪಾರ್ಥಸಾರಥಿ ಮಾತ್ರ 3445 ತೂಕ ಹೊಂದಿದೆ. ಮೊದಲನೇ ತಂಡದ ಎಲ್ಲ ಆನೆಗಳ ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ. ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ನಿತ್ಯದ ತಾಲೀಮಿನಲ್ಲಿ ಭಾಗವಹಿಸಲಿವೆ. ದಸರೆ ಮುಗಿಯುವದರೊಳಗೆ ಎಲ್ಲ ಆನೆಗಳ ತೂಕ ಹೆಚ್ಚು ಕಡಿಮೆ 100 ರಿಂದ 500 ಕಿಲೋ ಏರುತ್ತದೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…