90ರಿಂದ 425 ಕಿಲೋ ತನಕ ದೇಹ ತೂಕ ಹೆಚ್ಚಿಸಿಕೊಂಡ ದಸರೆ ಆನೆಗಳು
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ 14 ಆನೆಗಳ ತೂಕ ದಾಖಲಿಸುವ ಪ್ರಕ್ರಿಯೆ ಶುಕ್ರವಾರ ನಡೆಯಿತು.
ದಸರಾ ಗಜಪಡೆಗೆ ಸೇರಿದ ಆನೆಗಳ ತೂಕ ನೋಡುವ ಪ್ರಕ್ರಿಯೆಯು ಪ್ರತೀವರ್ಷ ಮೈಸೂರಿನ ಧನ್ವಂತ್ರಿ ರಸ್ತೆಯ ವೇ ಬ್ರಿಡ್ಜ್ ನಲ್ಲಿ ನಡೆಯುತ್ತದೆ. ಈ ಬಾರಿಯೂ ತೂಕದಲ್ಲಿ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5950 ಕೆ.ಜಿ ತೂಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಅರಮನೆ ಪ್ರವೇಶಿಸಿದಾಗಲೂ ಎಲ್ಲ ಆನೆಗಳ ತೂಕ ದಾಖಲಿಸಲಾಗಿತ್ತು. ಆಗಷ್ಟ್ 10ರಂದು ಅರ್ಜುನನ ತೂಕ 5775 ಇತ್ತು. ಒಂದು ತಿಂಗಳಲ್ಲಿ 175 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾನೆ.
ಅರಮನೆಗೆ ಕಾಲಿಟ್ಟ ಕ್ಷಣದಿಂದಲೇ ಎಲ್ಲ ಆನೆಗಳಿಗೆ ವಿಶೇಷ ಆಹಾರ ನೀಡಿ ಆರೈಕೆ ಮಾಡಲಾಗುತ್ತದೆ. ಜಂಬೂ ಸವಾರಿ ವೇಳೆಗೆ ಈ ಎಲ್ಲ ಆನೆಗಳು ತೂಕ ಹೆಚ್ಚಿಸಿಕೊಂಡು ಸದೃಢವಾಗುತ್ತವೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಈಗ ಬರೋಬ್ಬರಿ 5000 ಕಿಲೋ ತೂಗುತ್ತಿದ್ದಾನೆ. ಕಳೆದ ತಿಂಗಳು ಈತನ ತೂಕ 4,770 ಇತ್ತು. ಒಂದು ತಿಂಗಳಲ್ಲಿ 230 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾನೆ.
ಗಂಡಾನೆಗಳಿಗೆ ಹೋಲಿಸಿದರೆ ಸ್ಲಿಮ್ ಆಗಿದ್ದ ಹೆಣ್ಣಾನೆಗಳೂ ಈಗ ತೂಕ ಹೆಚ್ಚಿಸಿಕೊಂಡು ದಸರೆಯ ಕಾರ್ಯಭಾರ ವಹಿಸಲು ಸಿದ್ದವಾಗಿವೆ. 3,050 ಕಿಲೋ ತೂಕದ ಚೈತ್ರ ಒಂದು ತಿಂಗಳಲ್ಲಿ 3235 ಕಿಲೋ, 3100 ಕಿಲೋ ತೂಕದ ಕಾವೇರಿ 3245 ಕಿಲೋಗೆ ದೇಹ ತೂಕ ಏರಿಸಿಕೊಂಡಿದ್ದಾರೆ. 2920 ಕಿಲೋ ಇದ್ದ ಲಕ್ಷ್ಮೀ ಬರೋಬ್ಬರಿ 230 ಕಿಲೋ ತೂಕ ಹೆಚ್ಚಿಸಿಕೊಂಡಿದ್ದಾಳೆ. ದಸರೆಯ ಹಳೆಯ ಆನೆಗಳಲ್ಲಿ ಒಂದಾದ ವಿಜಯ 2760 ಕಿಲೋ ತೂಗುವ ಮೂಲಕ ಎಲ್ಲರಿಗಿಂತ ಹೆಚ್ಚು ಸ್ಲಿಮ್ ಆಗಿದ್ದಾಳೆ.
ಡಾ.ವಿ. ಕರಿಕಾಳನ್, ಡಿಸಿಎಫ್
ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲ ಮತ್ತು ಎರಡನೇ ತಂಡದ ಆನೆಗಳು ಸೇರಿ ಒಟ್ಟು 14 ಆನೆಗಳನ್ನು ತೂಕ ಮಾಡಿದ್ದೇವೆ. ಗಂಡಾನೆಗಳು 4000 ದಿಂದ 4600 ಸಾವಿರ ಕೆಜಿ ಇದ್ದು, ಕಿರಿಯ ವಯಸ್ಸಿನ ಆನೆ ಪಾರ್ಥಸಾರಥಿ ಮಾತ್ರ 3445 ತೂಕ ಹೊಂದಿದೆ. ಮೊದಲನೇ ತಂಡದ ಎಲ್ಲ ಆನೆಗಳ ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ. ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ನಿತ್ಯದ ತಾಲೀಮಿನಲ್ಲಿ ಭಾಗವಹಿಸಲಿವೆ. ದಸರೆ ಮುಗಿಯುವದರೊಳಗೆ ಎಲ್ಲ ಆನೆಗಳ ತೂಕ ಹೆಚ್ಚು ಕಡಿಮೆ 100 ರಿಂದ 500 ಕಿಲೋ ಏರುತ್ತದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…